ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬರಪೀಡಿತ ಪ್ರದೇಶಗಳ ಹೆಸರು-ವಿವರ ಶೀಘ್ರ ಘೋಷಣೆ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜುಲೈ 18: ವಸ್ತು ಸ್ಥಿತಿಯನ್ನು ಅವಲೋಕಿಸುತ್ತಿರುವ ರಾಜ್ಯ ಸರಕಾರ ಸದ್ಯದಲ್ಲೇ ಬರ-ಪೀಡಿತ ಪ್ರದೇಶಗಳ ಹೆಸರು-ವಿವರಗಳನ್ನು ಘೋಷಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು.

ರಾಜ್ಯದ 176 ತಾಲೂಕು ಪೈಕಿ ಕಳೆದ ವರ್ಷ ಮುಂಗಾರು ವೈಫಲ್ಯದಿಂದಾಗಿ 139 ತಾಲೂಕನ್ನು ಹಾಗೂ ಹಿಂಗಾರು ವೈಫಲ್ಯದ ಹಿನ್ನೆಲೆಯಲ್ಲಿ 160 ತಾಲೂಕುಗಳನ್ನು ಬರ-ಪೀಡಿತ ಎಂದು ಘೋಷಿಸಲಾಗಿತ್ತು.

'ಕಳೆದ ವರ್ಷಕ್ಕಿಂತ ಭೀಕರವಾಗಿದೆ ರಾಜ್ಯದ ಪ್ರಮುಖ ಜಲಾಶಯಗಳ ಸ್ಥಿತಿ''ಕಳೆದ ವರ್ಷಕ್ಕಿಂತ ಭೀಕರವಾಗಿದೆ ರಾಜ್ಯದ ಪ್ರಮುಖ ಜಲಾಶಯಗಳ ಸ್ಥಿತಿ'

ಈ ವರ್ಷ ಜುಲೈ ತಿಂಗಳಲ್ಲಿ ಅರ್ಧ ಭಾಗವೇ ಕಳೆದರೂ ವರುಣ ಕೃಪೆ ತೋರಿಲ್ಲ. ಜಲಾಶಯಗಳಲ್ಲಿ ನೀರಿಲ್ಲ! ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಕಳೆದ ವರ್ಷ ಈ ಅವಧಿಯಲ್ಲಿ 84 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಆದರೆ ಈ ಬಾರಿ ಅರ್ಧಕ್ಕಿಂತಲೂ ಕಡಿಮೆ ಅಂದರೆ ಕೇವಲ 40 ಟಿಎಂಸಿ ಅಡಿಯಷ್ಟು ನೀರು ಸಂಗ್ರಹ ಇದೆ.

Siddaramaiah

ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆಗಿಂತಲೂ ಶೇಕಡಾ 24 ರಷ್ಟು ಮಳೆಯ ಕೊರತೆ ಉಂಟಾಗಿದೆ. ರಾಜ್ಯದಲ್ಲಿ ಈ ವೇಳೆಗಾಗಲೇ 73 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ ಇದೀಗ 28 ಲಕ್ಷ ಹೆಕ್ಟೇರ್ ಪ್ರದೇಶಲ್ಲಿ ಮಾತ್ರ ಬಿತ್ತನೆಯಾಗಿದೆ.

English summary
Karnataka's drought hit areas will be announced soon, said by chief minister Siddaramaiah in Bengaluru. There is a shortage of water in reservoirs. Rain is not come as expected, he further added.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X