ಆಗಸ್ಟ್ 22ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ
ಬೆಂಗಳೂರು ಜುಲೈ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಗುರುವಾರ ಸಂಜೆ ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದೆ. ಆಗಸ್ಟ್ 22 ರಂದು ಮತದಾನ ನಡೆಯಲಿದ್ದು, ಆಗಸ್ಟ್ 25ರಂದು ಫಲಿತಾಂಶ ಹೊರಬೀಳಲಿದೆ.
ರಾಜ್ಯ ಚುನಾವಣಾ ಆಯೋಗ ಜುಲೈ 28ರಂದು ಬಿಬಿಎಂಪಿ ಚುನಾವಣೆ ನಡೆಸಲಾಗುತ್ತದೆ ಎಂದು ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಸುಪ್ರೀಂಕೋರ್ಟ್ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಿ, ಹೊಸ ವೇಳಾಪಟ್ಟಿ ಪ್ರಕಟಿಸುವಂತೆ ಆಯೋಗಕ್ಕೆ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಚುನಾವಣೆ ಪ್ರಮುಖ ದಿನಾಂಕಗಳು ಇಲ್ಲಿವೆ. [ಬಿಬಿಎಂಪಿಯನ್ನು 5 ಭಾಗ ಮಾಡಿ: ಬಿಎಸ್ ಪಾಟೀಲ್ ಸಮಿತಿ]

* ಜುಲೈ 17ರಿಂದ ಚುನಾವಣಾ ನೀತಿ ಸಂಹಿತೆ ಜಾರಿ.
* ಆಗಸ್ಟ್ 3 ರಂದು ಚುನಾವಣೆ ಅಧಿಸೂಚನೆ ಪ್ರಕಟ
* ಆಗಸ್ಟ್ 22 ರಂದು ಮತದಾನ ನಡೆಯಲಿದೆ.
* ಆಗಸ್ಟ್ 25 ರಂದು ಫಲಿತಾಂಶ
* ಆಗಸ್ಟ್ 10 ರಂದು ನಾಮಪತ್ರ ಸಲ್ಲಿಕೆ ಕೊನೆ ದಿನಾಂಕ
* ಆಗಸ್ಟ್ 11 ರಂದು ನಾಮಪತ್ರಗಳ ಪರಿಶೀಲನೆ
* ಆಗಸ್ಟ್ 13 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕ
* ಆಗಸ್ಟ್ 24 ರಂದು ಅಗತ್ಯವಿದ್ದರೆ ಮರು ಮತದಾನ.
ಮತದಾನದ ಅವಧಿ: ಆಗಸ್ಟ್ 22 (ಶನಿವಾರ) ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆ ತನಕ.
ಮತ ಎಣಿಕೆ ದಿನ: ಆಗಸ್ಟ್ 25 (ಮಂಗಳವಾರ) ಬಿಬಿಎಂಪಿ ವ್ಯಾಪ್ತಿಯಲ್ಲಿಯ ಒಂದು ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಯಿಂದ ಆರಂಭ.
ಒಟ್ಟು ವಾರ್ಡ್ ಗಳು: 198 ವಾರ್ಡ್ ಗಳು
ನೀತಿ ಸಂಹಿತೆ: ಜುಲೈ 17, 2015ರಿಂದ ಆಗಸ್ಟ್ 26, 2015ರ ತನಕ.
ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976 ರ ಪ್ರಕರಣ 55 ಮತ್ತು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ಚುನಾವಣೆ) ನಿಯಮಗಳು 1979 ರ ನಿಯಮ 3 ರ ಅನ್ವಯ ಹಾಗೂ 13/04/2015ರ ವಾರ್ಡುವಾರು ಮೀಸಲಾತಿ ಪಟ್ಟಿಯನ್ವಯ ಮೇಲ್ಕಂಡ ಚುನಾವಣಾ ವೇಳಾಪಟ್ಟಿಯನ್ನು ನಡೆಸಲು ಆದೇಶಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಕವಿತಾರಾಣಿ ಅವರು ಹೇಳಿದ್ದಾರೆ.
(ಒನ್ ಇಂಡಿಯಾ ಸುದ್ದಿ)
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications