ಕೆಂಗೇರಿ ಕಬೋರ್ಡ್ ಮರ್ಡರ್ ಮಿಸ್ಟ್ರಿಗೆ ರೋಚಕ ತಿರುವು
ಕಬೋರ್ಡಿನಲ್ಲಿ ಅಸ್ಥಿಪಂಜರವಾಗಿ ಪತ್ತೆಯಾದ ವೃದ್ಧೆ ಶಾಂತಕುಮಾರಿಯವರ ಕೊಲೆಗೆ ಆಕೆಯ ಮೊಮ್ಮಗ ಸಂಜಯ ಕಾರಣವಲ್ಲ, ಬದಲಾಗಿ ಆತನ ತಾಯಿ ಶಶಿಕಲಾ ಅವರೇ ತಮ್ಮ ತಾಯಿಯನ್ನು ಸಾಯಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ನಂದೀಶ್ ಎನ್ನುವವರು ನೀಡಿದ್ದಾರೆ.
ಬೆಂಗಳೂರು, ಮೇ 15: ಕೆಂಗೇರಿಯ ಮನೆಯೊಂದರ ಕಬೋರ್ಡ್ ನಲ್ಲಿ ಪತ್ತೆಯಾದ ಅಸ್ಥಿಪಂಜರದ ಕುರಿತು ತನಿಖೆ ನಡೆಸುತ್ತಿದ್ದ ಬೆಂಗಳೂರು ಪೊಲೀಸರಿಗೆ ಮತ್ತಷ್ಟು ರೋಚಕ ಮಾಹಿತಿಗಳು ಲಭ್ಯವಾಗಿವೆ.
ಇದುವರೆಗೂ ಅಂದುಕೊಂಡಂತೆ, ಕಬೋರ್ಡಿನಲ್ಲಿ ಅಸ್ಥಿಪಂಜರವಾಗಿ ಪತ್ತೆಯಾದ ವೃದ್ಧೆ ಶಾಂತಕುಮಾರಿಯವರ ಕೊಲೆಗೆ ಆಕೆಯ ಮೊಮ್ಮಗ ಸಂಜಯ ಕಾರಣವಲ್ಲ, ಬದಲಾಗಿ ಆತನ ತಾಯಿ ಶಶಿಕಲಾ ಅವರೇ ತಮ್ಮ ತಾಯಿಯನ್ನು ಸಾಯಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಸಂಜಯ್ ಸ್ನೇಹಿತ ನಂದೀಶ್ ಎನ್ನುವವರು ನೀಡಿದ್ದಾರೆ.[ಬೆಂಗಳೂರು: ಅಜ್ಜಿಯನ್ನು ಕೊಂದು 7 ತಿಂಗಳು ಕಬೋರ್ಡಿನಲ್ಲಿಟ್ಟದ್ದ ಮೊಮ್ಮಗ!]
ಘಟನೆಯ ಹಿನ್ನಲೆ
ಹೊಟೇಲಿನಿಂದ ತರಿಸಿದ್ದ ತಿಂಡಿಯನ್ನು ತಿನ್ನಲೊಲ್ಲೆ ಎಂದ ಅಮ್ಮ ಶಾಂತಕುಮಾರಿಗೆ, ಮಗಳು ಶಶಿಕಲಾ ಲಟ್ಟಣಿಗೆಯಿಂದ ಹೊಡೆದಿದ್ದಾಳೆ. ಸುಮಾರು 70 ವರ್ಷದ ವೃದ್ಧೆಗೆ ಆ ಪೆಟ್ಟನ್ನು ತಾಳಲಾಗಿಲ್ಲ. ಅವರು ತಕ್ಷಣವೇ ತೀವ್ರ ರಕ್ತಸ್ರಾವದಿಂದ ಕೆಳಕ್ಕುರುಳಿದ್ದಾರೆ. ಇದರಿಂದ ಆತಂಕಗೊಂಡ ಮಗಳು ಶಶಿಕಲಾ, ಮತ್ತು ಇಂಜಿನಿಯರಿಂಗ್ ಓದುತ್ತಿದ್ದ ಶಶಿಕಲಾ ಮಗ ಸಂಜಯ್, ವೃದ್ಧೆಯನ್ನು ಆಸ್ಪತ್ರೆಗೆ ಕಳಿಸಿದರೆ ಪೊಲೀಸ್ ಕೇಸಾಗುತ್ತದೆಂದು ಹೆದರಿ, ಸುಮ್ಮನಿದ್ದಾರೆ.

ಅಷ್ಟರಲ್ಲಾಗಲೇ ವೃದ್ಧೆ ತೀರಿಹೋಗಿದ್ದಾರೆ. ಆಕೆಯ ಶವವನ್ನು ತಮ್ಮ ಮೂಲ ಊರಾದ ಶಿವಮೊಗ್ಗ ಬಳಿಯ ಸಾಗರಕ್ಕೆ ರವಾನಿಸಬೇಕೆಂದುಕೊಂಡಿದ್ದ ತಾಯಿ-ಮಗನಿಗೆ ಬೇರೆ ಬೇರೆ ಕಾರಣಗಳಿಂದ ಶವವನ್ನು ಸಾಗಿಸುವುದಕ್ಕೆ ಸಾಧ್ಯವಾಗಿಲ್ಲ. ಅಂಗಡಿಯಿಂದ ನೀಲಿ ಬಣ್ಣದ ಟಬ್ ವೊಂದನ್ನು ತಂದು ಹೆಣವನ್ನು ಅದರಲ್ಲಿರಿಸಿದ್ದಾರೆ.
ಒಂದೇ ದಿನದಲ್ಲಿ ಶವ ದುರ್ನಾತ ಬೀರುವುದಕ್ಕೆ ಶುರುವಾಗುತ್ತಿದ್ದಂತೆಯೇ ಶವವನ್ನು ಕಬೋರ್ಡಿನಲ್ಲಿಟ್ಟು, ಅದಕ್ಕೊಂದಷ್ಟು ರಾಸಾಯನಿಕ ಸಿಂಪಡಿಸಿ ವಾಸನೆ ಬಾರದಂತೆ ಮಾಡಿದ್ದಾರೆ. ನಂತರ ವಾರ್ಡ್ ರೋಬ್ ಗೆ ಸಿಮೆಂಟಿನಿಂದ ಕವರ್ ಮಾಡಿದ್ದಾರೆ. ಕಳೆದ ವರ್ಷದ ಆಗಸ್ಟ್ ನಿಂದ ಮೇ, 7, 2017ರವರೆಗೂ ವೃದ್ಧೆಯ ಹೆಣ ಆ ವಾರ್ಡ್ ರೋಬಿನಲ್ಲೇ ಇತ್ತು!
ಶವವನ್ನು ಬೇರೆಡೆ ರವಾನಿಸುವುದಕ್ಕೆ ಸಹಾಯ ಮಾಡುವುದಾಗಿ ಹೇಳಿದ್ದ ಸಂಜಯ್ ಸ್ನೇಹಿತ ನಂದೀಶ್ ಎನ್ನುವವರನ್ನು ಬಂಧಿಸಲಾಗಿದೆ. ಕೊಲೆಯ ಕುರಿತು ಅವರೇ ಪೊಲೀಸರಿಗೆ ಹೆಚ್ಚಿನ ಮಾಹಿತಿ ನೀಡುತ್ತಿದ್ದಾರೆ.
ಅಜ್ಜಿ ಕಾಣಿಸುತ್ತಿಲ್ಲ ಎಂದು ಅಕ್ಕ-ಪಕ್ಕದವರು ಕೇಳಿದರೆ ಅವರು ಊರಿಗೆ ಹೋಗಿದ್ದಾರೆಂದೇ ತಾಯಿ-ಮಗ ಹೇಳುತ್ತಿದ್ದರು. ವಿಚ್ಛೇದನ ಪಡೆದಿದ್ದ ಶಶಿಕಲಾ ತಮ್ಮ ಮಗ ಸಂಜಯ್ ಜೊತೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗಷ್ಟೇ ತಾವು ಮನೆ ಖಾಲಿ ಮಾಡುತ್ತಿದ್ದೇವೆಂದು ಮನೆ ಮಾಲೀಕ ನವೀನ್ ಗೆ ತಿಳಿಸಿದ್ದ ಸಂಜಯ್ ಅವರಿಂದ ಅಡ್ವಾನ್ಸ್ ಹಿಂಪಡೆದು, ಮನೆ ಖಾಲಿಮಾಡಿಕೊಂಡು ಹೋಗಿದ್ದ. ಬೇರೊಬ್ಬ ಬಾಡಿಗೆದಾರನಿಗ ಮನೆ ಬಾಡಿಗೆ ನೀಡುವ ಸಮಯದಲ್ಲಿಕಬೋರ್ಡ್ ತೆರೆದ ಮಾಲೀಕರಿಗೆ ವಾರ್ಡ್ ರೋಬಿನಲ್ಲಿ ತಮ್ಮ ಅನುಮತಿಯಿಲ್ಲದೆ ಕೆಲ ಮಾರ್ಪಾಡು ಮಾಡಿರುವುದು ಗಮನಕ್ಕೆ ಬಂದಿದೆ.
ಸಂಜಯ್ ಗೆ ಫೊನ್ ಮಾಡಿದರೆ ಅತ್ತೆಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದರುವುದನ್ನು ಕಂಡು ಏನೋ ಅಚಾತುರ್ಯ ನಡೆದಿದೆ ಎಂಬ ಸೂಚನೆ ಮಾಲೀಕರಿಗೆ ಸಿಕ್ಕಿದೆ. ತಕ್ಷಣವೇ ಎಚ್ಚೆತ್ತುಕೊಂಡ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಬಂದು ಸಿಮೆಂಟ್ ಕವರಿಂಗ್ ಒಡೆದು ನೋಡಿದಾಗ ವೃದ್ಧೆಯ ಅಸ್ತಿಪಂಜರ ದೊರಕಿದೆ.
ಇದೀಗ ಸಂಜಯ್ ಮತ್ತು ಶಶಿಕಲಾ ಇಬ್ಬರೂ ತಲೆಮರೆಸಿಕೊಂಡಿದ್ದು, ಉತ್ತರ ಭಾರತದ ಕಡೆ ಹೋಗಿರಬಹುದೆಂದು ಶಂಕಿಸಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications