26ಕ್ಕೆ ಕೌದೇನಹಳ್ಳಿ ಕೆರೆ ಆವರಣದಲ್ಲಿ 'ಕೆರೆ ದೀಪೋತ್ಸವ'
ಬೆಂಗಳೂರು, ಅಕ್ಟೋಬರ್ 24: ಇದೇ ತಿಂಗಳ 29ರಂದು ನರಕ ಚತುರ್ದಶಿ. ಪಟಾಕಿ ಹೊಡೆದು ಪರಿಸರ ಮಲಿನಗೊಳಿಸುವ ನಿರ್ಧಾರ ಕೈ ಬಿಟ್ಟು, ಪರಿಸರ ಸ್ನೇಹಿ ಹಬ್ಬದಾಚರಣೆಗೆ ಉತ್ತೇಜನ ನೀಡುವ ಉದ್ದೇಶದಿಂದ 'ಕೆರೆ ದೀಪೋತ್ಸವ' ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿವಿಧ ಸಂಘ-ಸಂಸ್ಥೆಗಳು ಒಟ್ಟಾಗಿ ಕೈಗೊಂಡಿರುವ ಈ ವಿಶಿಷ್ಟ ಕಾರ್ಯಕ್ರಮದ ವಿವರಗಳನ್ನು ಇಲ್ಲಿ ನೀಡಲಾಗಿದೆ. ಯುನೈಟೆಡ್ ವೇ ಬೆಂಗಳೂರು, ಪರಿಸರ ಸಂರಕ್ಷಣಾ ಟ್ರಸ್ಟ್ ಮತ್ತು ಬಿಬಿಎಂಪಿ ಸಂಯುಕ್ತವಾಗಿ ಅಕ್ಟೋಬರ್ 26ರಂದು 'ಕೆರೆ ದೀಪೋತ್ಸವ' ಆಯೋಜಿಸಿವೆ. ದೀಪಾವಳಿ ಪ್ರಯುಕ್ತ ಈ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.[ಸಮೃದ್ಧಿ ಸಂಪ್ರೀತಿ ಸಮಾನತೆಯ ದೀಪಾವಳಿ]

26ರ ಸಂಜೆ 4ರಿಂದ 6 ಗಂಟೆವರೆಗೆ ಕೃಷ್ಣರಾಜಪುರದ ಐಟಿಐ ಕಾಲೋನಿ ಸಮೀಪದ ಕೌದೇನಹಳ್ಳಿ ಕೆರೆ ಅವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 4ಕ್ಕೆ ಚಿತ್ರಕಲೆ ಹಾಗೂ ರಂಗೋಲಿ ಕಾರ್ಯಕ್ರಮ ಇದೆ. 5.30ಕ್ಕೆ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಅರಿವು ಮೂಡಿಸಲಾಗುವುದು. 5.45ಕ್ಕೆ ಮುಖ್ಯ ಅತಿಥಿಗಳು ಹಾಗೂ ನಾಗರಿಕರು ದೀಪ ಬೆಳಗಿಸಲಿದ್ದಾರೆ.[ಅಜ್ಞಾನದ ಕತ್ತಲೆಯನ್ನು ನೀಗಿಸುವ ಜ್ಞಾನ ಜ್ಯೋತಿ ದೀಪಾವಳಿ]
ಮುಖ್ಯ ಅತಿಥಿಯಾಗಿ ಮೇಯರ್ ಪದ್ಮಾವತಿ, ಕೆ.ಆರ್.ಪುರಂನ ಶಾಸಕ ಬಿ.ಎ.ಬಸವರಾಜು, 26ನೇ ವಾರ್ಡ್ ನ ಕಾರ್ಪೋರೇಟರ್ ಪದ್ಮಾವತಿ ಶ್ರೀನಿವಾಸ್, ಮುಖ್ಯ ಎಂಜಿನಿಯರ್ ಗಳಾದ ಸೋಮಶೇಖರ್, ಬಿ.ವಿ.ಸತೀಶ್ ಮತ್ತಿತರರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿಯಾದ ಸಾಸಿವೆ ಎಣ್ಣೆ, ಬೇವಿನ ಎಣ್ಣೆ, ಕಡ್ಲೇಕಾಯಿ ಎಣ್ಣೆ, ಎಳ್ಳೆಣ್ಣೆ, ಇಪ್ಪೆ ಎಣ್ಣೆ, ಹರಳೆಣ್ಣೆ -ಈ ಐದು ಬಗೆಯ ಎಣ್ಣೆಗಳನ್ನು ಬಳಸಲಾಗುತ್ತದೆ. ಇದರ ಜತೆಗೆ ಆರೋಗ್ಯಕ್ಕೂ ಪೂರಕವಾದ, ಸೊಳ್ಳೆಗಳನ್ನು ದೂರವಿಡಬಲ್ಲಂಥ ಎಣ್ಣೆಗಳನ್ನು ದೀಪ ಬೆಳಗಲು ಬಳಸಲಾಗುತ್ತದೆ.[ಸೊಳ್ಳೆಗಳಿಗೆ ಯಮಪಾಶ, ಮಂಗಳೂರಿನ ಈ ಮೋಝಿಕ್ವಿಟ್]
ರೆಡ್ ಎಫ್ ಎಂನ ಹೆಸರಾಂತ ರೆಡಿಯೋ ಜಾಕಿ ರಾಜ್ ಕೂಡ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ಎಲೆ ಮೇಲೆ ಚಿತ್ರ ಬಿಡಿಸುವ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತಿತರ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.
ಸಂಜೆ 6ಕ್ಕೆ ಉಪಾಹಾರ ವ್ಯವಸ್ಥೆ ಇದೆ. ಹೆಚ್ಚಿನ ಮಾಹಿತಿಗಾಗಿ [email protected] ಹಾಗೂ ಮೊಬೈಲ್ ಸಂಖ್ಯೆ 9739059886 ಸಂಪರ್ಕಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications