ಕಿಕ್ ಬ್ಯಾಕ್ ಕೇಸ್, ಯಡಿಯೂರಪ್ಪ ಹಾಗೂ ಫ್ಯಾಮಿಲಿ ನಿರಾಳ
ಬೆಂಗಳೂರು, ಅಕ್ಟೋಬರ್ 26 : ಮಾಜಿ ಮುಖ್ಯಮಂತ್ರಿ ಹಾಗೂ ಶಿವಮೊಗ್ಗ ಸಂಸದ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಕಿಕ್ ಬ್ಯಾಕ್ ಪ್ರಕರಣದ ತೀರ್ಪು ಬುಧವಾರ 11.09ಕ್ಕೆ ಹೊರ ಬಂದಿದೆ. ಯಡಿಯೂರಪ್ಪ ಅವರು ಎಲ್ಲಾ ಐದು ಆರೋಪಗಳಿಂದ ದೋಷಮುಕ್ತಗೊಂಡಿದ್ದಾರೆ.
11.15: ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳ ವಿರುದ್ಧ ಸಿಬಿಐ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿರುವ ಆರೋಪಗಳನ್ನು ಸಾಬೀತು ಪಡಿಸಲು ಸೂಕ್ತ ಸಾಕ್ಷಿಗಳಿಲ್ಲದ ಕಾರಣ, ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿದೆ ಎಂದು ನ್ಯಾ. ಧರ್ಮಗೌಡರ್ ಅವರು ತೀರ್ಪು ಪ್ರಕಟಿಸಿದ್ದಾರೆ. [2012:ಯಡಿಯೂರಪ್ಪ ಹಾಗೂ ಕುಟುಂಬಕ್ಕೆ ಜಾಮೀನು]
11.10: ಯಡಿಯೂರಪ್ಪ ಹಾಗೂ ಅವರ ಮಕ್ಕಳ ಪ್ರೇರಣಾ ಟ್ರಸ್ಟ್ ತನ್ನ ಅದಾಯವನ್ನು ಬಹುಪಾಲು ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸಿದೆ.ಟ್ರಸ್ಟಿಗೆ ಯಾವುದೇ ಲಂಚದ ಮೊತ್ತ ಬಂದಿಲ್ಲ ಎಂದು ಯಡಿಯೂರಪ್ಪ ಅವರ ಪರ ವಕೀಲ ಸಿವಿ ನಾಗೇಶ್ ರಿಂದ ವಾದಿಸಿದರು. [ಯಡಿಯೂರಪ್ಪಗೆ ಮತ್ತೆ 5 ಡಿನೋಟಿಫಿಕೇಷನ್ ಕಂಟಕ]

11.09: ಎಲ್ಲಾ 5 ಪ್ರಕರಣಗಳಲ್ಲೂ ಯಡಿಯೂರಪ್ಪ ಅವರನ್ನು ದೋಷಮುಕ್ತಗೊಳಿಸಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
10.56: ಒಟ್ಟು ಐದು ಪ್ರಕರಣದ ವಿಚಾರಣೆ ಹಾಗೂ ತೀರ್ಪು ಪ್ರಕರಣ. ಯಡಿಯೂರಪ್ಪ ಅವರ ಪರ ವಕೀಲ ಸಿವಿ ನಾಗೇಶ್ ರಿಂದ ವಾದ. [ರೆಡ್ಡಿ ಡೈಲಾಗ್ ರಿಪೀಟ್, 'ಸತ್ಯಮೇವ ಜಯತೆ' ಎಂದ ಯಡಿಯೂರಪ್ಪ]
10.55: ಈ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 7 ವರ್ಷ ಶಿಕ್ಷೆಯಾಗಲಿದೆ. 3 ವರ್ಷಗಳಿಗಿಂತ ಕಡಿಮೆ ಅವಧಿ ಶಿಕ್ಷೆ ಪ್ರಕಟವಾದರೆ, ಜಾಮೀನು ಪಡೆಯಬಹುದಾಗಿದೆ. ಇದಕ್ಕಾಗಿ ಶ್ಯೂರಿಟಿಗಳನ್ನು ಕೂಡಾ ಕರೆದುಕೊಂಡು ಬಂದಿರುವ ಯಡಿಯೂರಪ್ಪ.
10.50: ಕೋರ್ಟ್ ಆವರಣ ಪ್ರವೇಶಿಸಿದ ಬಿಎಸ್ ಯಡಿಯೂರಪ್ಪ, ಬಿವೈ ರಾಘವೇಂದ್ರ, ವಿಜಯೇಂದ್ರ, ಅಳಿಯ ಸೋಹನ್ ಕುಮಾರ್, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಜಿಂದಾಲ್ ಸಂಸ್ಥೆ, ಸೌತ್ ವೆಸ್ಟ್ ಸಂಸ್ಥೆಯ ಅಧಿಕಾರಿಗಳು, ಮಾಜಿ ಸಚಿವ ರೇಣುಕಾಚಾರ್ಯ. [ಯಡಿಯೂರಪ್ಪ ಭವಿಷ್ಯ ನಿರ್ಧಾರ?]
10.45: ಭ್ರಷ್ಟಾಚಾರ ಹಗರಣದ ತೀರ್ಪನ್ನು ನೀಡಲು ಸಿಬಿಐ ವಿಶೇಷ ನ್ಯಾಯಲಯ ಸಿದ್ಧವಾಗಿದೆ. ನ್ಯಾ. ಬಿಆರ್ ಧರ್ಮ ಆರ್ ಬಿ ಧರ್ಮಗೌಡ ಅವರು ಹಾಜರು.
10.42: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯ
10.40: ಕೋರ್ಟ್ ಆವರಣದಲ್ಲಿ ಕಾರಿನಲ್ಲಿ ಕುಳಿತ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಕ್ಕಳು.
ಏನಿದು ಪ್ರಕರಣ: ಜಿಂದಾಲ್ ಸ್ಟೀಲ್ ವರ್ಕ್ಸ್, ಸೌತ್ ವೆಸ್ಟ್ ಮೈನಿಂಗ್ ಕಂಪನಿಗಳಿಗೆ ಗಣಿಗಾರಿಕೆ ಗುತ್ತಿಗೆ ನೀಡಲು ಯಡಿಯೂರಪ್ಪನವರು ಪ್ರೇರಣಾ ಟ್ರಸ್ಟ್, ಧವಳಗಿರಿ ಪ್ರಾಪರ್ಟಿ ಡೆವಲಪರ್ಸ್ ಮತ್ತು ಭಗತ್ ಹೋಂ ಕಂಪನಿಗಳ ಹೆಸರಿನಲ್ಲಿ 20 ಕೋಟಿ ರು. ಲಂಚ ಪಡೆದಿದ್ದರೆಂದು ಆರೋಪಿಸಿ ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು ತಮ್ಮ ಅಕ್ರಮ ಗಣಿಗಾರಿಕೆಯ ವರದಿಯಲ್ಲಿಯೂ ಪ್ರಸ್ತಾಪಿಸಿದ್ದರು.
ಆರೋಪಿಗಳು: ಯಡಿಯೂರಪ್ಪ, ಅವರ ಇಬ್ಬರು ಮಕ್ಕಳಾದ ಬಿ.ವೈ. ವಿಜಯೇಂದ್ರ, ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ, ಅಳಿಯ ಸೋಹನ್ ಕುಮಾರ್, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಜಿಂದಾಲ್ ಸ್ಟೀಲ್ ವರ್ಕ್ಸ್ ಮತ್ತು ಸೌತ್ ವೆಸ್ಟ್ ಮೈನಿಂಗ್ ಕಂಪನಿ ನಿರ್ದೇಶಕರು ಒಟ್ಟು 13 ಜನ ಆರೋಪಿಗಳು.
ಬಿಎಸ್ ಯಡಿಯೂರಪ್ಪ ಅವರಿಗೆ ಗಣಿ ಕಂಪನಿಗಳಿಂದ ಕಿಕ್ ಬ್ಯಾಕ್ ಪಡೆದ ಪ್ರಕರಣದಲ್ಲಿ ಹೈಕೋರ್ಟ್ ಡಿಸೆಂಬರ್ 10, 2012ರಲ್ಲಿ ಜಾಮೀನು ನೀಡಿತ್ತು.
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications