ಕೆಎಸ್ಒಯು ಮಾನ್ಯತೆ ರದ್ದು: ಪ್ರಧಾನಿಗೆ ಮುಖ್ಯಮಂತ್ರಿ ಪತ್ರ
ಯುಜಿಸಿಯಿಂದ ಕೆಎಸ್ ಒಯು ಅಮಾನ್ಯತೆ. ಪ್ರಧಾನಿಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ. ಯುಜಿಸಿಗೆ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಸೂಚಿಸುವಂತೆ ಮನವಿ.
ಬೆಂಗಳೂರು, ಆಗಸ್ಟ್ 22: ವಿಶ್ವವಿದ್ಯಾಲಯ ಆಯೋಗವು (ಯುಜಿಸಿ) ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) ಮಾನ್ಯತೆಯನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಮಸ್ಯೆ ಪರಿಹರಿಸುವಂತೆ ಕೋರಿದ್ದಾರೆ.
ಯುಜಿಸಿಯ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸು ಭಗ್ನಗೊಂಡಿದ್ದು, ಈ ಬಗ್ಗೆ ತಾವೇ (ಪ್ರಧಾನಿ) ಖುದ್ದಾಗಿ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ, ಯುಜಿಸಿಗೆ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವಂತೆ ಸೂಚಿಸಬೇಕೆಂದು ಅವರು ಮನವಿ ಮಾಡಿದ್ದಾರೆ,
ಕೆಎಸ್ಒಯುನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಬಹುಪಾಲು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಾಗಿದ್ದು, ಯುಜಿಸಿಯ ನಿರ್ಧಾರದಿಂದಾಗಿ, ಈ ವಿದ್ಯಾರ್ಥಿಗಳು ತಮ್ಮ ಜೀವನದ ಮಹತ್ವದ ಘಟ್ಟದಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಪಡೆಯುವ ಅವಕಾಶದಿಂದ ವಂಚಿತರಾಗಿದ್ದಾರೆ. ಈ ಆತಂಕದಿಂದ ಆ ವಿದ್ಯಾರ್ಥಿಗಳನ್ನು ಪಾರು ಮಾಡಬೇಕಿದೆ ಎಂದು ಅವರು ವಿವರಿಸಿದ್ದಾರೆ.
Comments
English summary
Chief Minister of Karnataka writes a letter to PM Modi to look into the issue of De-recognition of Karnataka State Open University (KSOU) by UGC. He requests him to guide UGC to change its decision with positive verdict about the university.
Story first published: Tuesday, August 22, 2017, 15:53 [IST]