ಬೆಂಗಳೂರು-ಚೆನ್ನೈ ನಡುವೆ ದೇಶದ ಮೊದಲ ಬಯೋ ಬಸ್ ಸಂಚಾರ
ಬೆಂಗಳೂರು, ಜುಲೈ 05 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶೇ 100ರಷ್ಟು ಜೈವಿಕ ಇಂಧನದಿಂದ ಸಂಚಾರ ನಡೆಸುವ ದೇಶದ ಪ್ರಥಮ ಬಸ್ ಸಂಚಾರಕ್ಕೆ ಚಾಲನೆ ನೀಡಿದೆ. ಬೆಂಗಳೂರು-ಚೆನ್ನೈ ನಡುವೆ ಪ್ರಾಯೋಗಿಕವಾಗಿ ಈ ಬಸ್ ಸಂಚಾರ ನಡೆಸಲಿದೆ.
ಸೋಮವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ನಟಿ ಹರ್ಷಿಕಾ ಪೂಣಚ್ಛ ಅವರು ಜೈವಿಕ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಐರಾವತ ಮಲ್ಟಿ ಆಕ್ಸೆಲ್ ಬಸ್ ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ಸಂಪೂರ್ಣವಾಗಿ ಜೈವಿಕ ಇಂಧನವನ್ನು ಇದಕ್ಕೆ ಬಳಸಲಾಗುತ್ತಿದೆ. [ಬಯೋ ಬಸ್ ಉಪಯೋಗಗಳು]

ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, 'ಪ್ರಾಯೋಗಿಕವಾಗಿ ಒಂದು ಬಸ್ಸಿಗೆ ಶೇ 100 ರಷ್ಟು ಜೈವಿಕ ಇಂಧನ ಬಳಸಿ ಕಾರ್ಯಾಚರಣೆಗೆ ಇಳಿಸಲಾಗಿದೆ. ಹಿಂದೆ ಶೇ 20ರಷ್ಟು ಜೈವಿಕ ಇಂಧನ ಬಳಸಿ 10 ಬಸ್ಸುಗಳ ಸಂಚಾರಕ್ಕೆ ಚಾಲನೆ ನೀಡಲಾಗಿತ್ತು' ಎಂದರು. [ರಸ್ತೆಗಿಳಿದ KSRTC ಬಯೋ ಬಸ್]
'ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ 1,700 ಬಸ್ಸುಗಳಿಗೆ ಶೇ 20ರಷ್ಟು ಬಯೋ ಡೀಸೆಲ್ ಬಳಸಲು ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲೇ ಈ ಬಸ್ಸುಗಳು ಸಂಚಾರ ಆರಂಭಿಸಲಿವೆ. ಜೈವಿಕ ಇಂಧನ ಬಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಯಾಗುತ್ತದೆ ಮತ್ತು ಡೀಸೆಲ್ಗಿಂತ 5 ರೂ. ಕಡಿಮೆ ದರದಲ್ಲಿ ಇಂಧನ ಲಭ್ಯವಾಗುತ್ತದೆ' ಎಂದರು.

'ಜೈವಿಕ ಇಂಧನವನ್ನು ವಿದೇಶದಿಂದ ಅಮದು ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಕೊಳೆತ ಆಹಾರ, ಕೊಬ್ಬು, ಖಾದ್ಯ ತೈಲಗಳನ್ನು ನಾನಾ ಪ್ರಕ್ರಿಯೆಗಳ ಮೂಲಕ ಜೈವಿಕ ಇಂಧನ ತಯಾರಿಸಲಾಗುತ್ತದೆ. ಇದರಿಂದ ಪರಿಸರಕ್ಕೆ ಯಾವುದೇ ಹಾನಿಇಲ್ಲ' ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದರು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications