ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಶಾಲೆ ನೆಲಸಮ, ಇ.ಕೃಷ್ಣಪ್ಪ ಅವರ ವಿರುದ್ಧ ಚಾರ್ಜ್ ಶೀಟ್

|
Google Oneindia Kannada News

ಬೆಂಗಳೂರು, ಜುಲೈ 02 : ನಿರ್ಮಾಪಕ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸರ್ಕಾರಿ ಶಾಲೆ ನೆಲಸಮಗೊಳಿಸಿ, ಆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಅವರ ಮೇಲಿದೆ.

2014ರ ಆಗಸ್ಟ್ 14ರಂದು ಎಂ.ಭಾಸ್ಕರ್ ಅವರು ಲೋಕಾಯುಕ್ತರಿಗೆ ನೀಡಿದ ದೂರಿನ ಅನ್ವಯ ತನಿಖೆ ನಡೆಸಿ, ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಭ್ರಷ್ಟಾಚಾರ ಪ್ರತಿಬಂಧನ ಕಾಯ್ದೆ ಪ್ರಕಾರ ಆರೋಪ ಪಟ್ಟಿ ಸಲ್ಲಿಸಲಾಗಿದೆ. [ಗಣೇಶ್ 'ಮುಂಗಾರು ಮಳೆ-2'ಗೆ ಅದ್ದೂರಿ ಮುಹೂರ್ತ]

E Krishnappa

ಏನಿದು ಪ್ರಕರಣ? : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಡಕಮಾರನಹಳ್ಳಿ ಗ್ರಾಮದ ಸರ್ವೆ ನಂಬರ್ 16/2ರಲ್ಲಿ ಪ್ರಾಥಮಿಕ ಶಾಲೆ ಕಟ್ಟಡದ ಪಕ್ಕದಲ್ಲಿಯೇ ಕೃಷ್ಣಪ್ಪ ಅವರ ಮನೆ ಇದೆ. ಕೃಷ್ಣಪ್ಪ ಅವರು 2012ರಲ್ಲಿ ಶಾಲೆಯನ್ನು ನೆಲಸಮಗೊಳಿಸಿ, ಆ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಪೌಂಡ್ ನಿರ್ಮಿಸಿಕೊಂಡಿದ್ದಾರೆ ಎಂಬುದು ಆರೋಪ. [ಸರ್ಕಾರಕ್ಕೆ ಮುಖಭಂಗ, ಲೋಕಾಯುಕ್ತ ನೇಮಕ ಕಡತ ವಾಪಸ್]

ಎಂ.ಭಾಸ್ಕರ್ ಅವರು ಈ ಕುರಿತು ಲೋಕಾಯಕ್ತರಿಗೆ ದೂರು ನೀಡಿದ್ದರು. ಸರ್ಕಾರದ ಆಸ್ತಿ ಕಬಳಿಕೆ ಆಗಿದ್ದರೂ ಕೃಷ್ಣಪ್ಪ ಅವರ ಪ್ರಭಾವದಿಂದಾಗಿ ಯಾವ ಅಧಿಕಾರಿಯೂ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದರು.['ಲೋಕಾಯುಕ್ತ ಸಂಸ್ಥೆ ಮುಚ್ಚಲು ಸರ್ಕಾರದ ಷಡ್ಯಂತ್ರ']

ತನಿಖೆ ನಡೆಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೃಷ್ಣಪ್ಪ ಅವರ ಜೊತೆಗೆ ಹಿಂದೆ ಅಲ್ಲಿ ಕೆಲಸ ಮಾಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ನರಸಿಂಹಮೂರ್ತಿ ಅವರ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

English summary
Karnataka Lokayukta police filed charge sheet against former MLC E.Krishnappa in government land encroachment case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X