ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣರಾಜ್ಯೋತ್ಸವದಂದು ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣರಿಂದ ಹೆಲ್ಮೆಟ್ ವಿತರಣೆ

By Sachhidananda Acharya
|
Google Oneindia Kannada News

ಬೆಂಗಳೂರು, ಜನವರಿ 24: ಈ ಬಾರಿಯ ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ವಸತಿ ಸಚಿವ ಹಾಗೂ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ, ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ನಿರ್ಧರಿಸಿದ್ದಾರೆ.

ವಿಜಯನಗರದಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಐಎಸ್ಐ ಮಾರ್ಕಿನ ಹೆಲ್ಮೆಟ್ ಗಳನ್ನು ಉಭಯ ನಾಯಕರು ಉಚಿತವಾಗಿ ಹಂಚಲಿದ್ದಾರೆ.

ಐಎಸ್ಐಗೆ ವಿದೇಶಿ ಹೆಲ್ಮೇಟ್ ಅಡ್ಡಿ: ಪೊಲೀಸರಿಗೆ ಗೊಂದಲಐಎಸ್ಐಗೆ ವಿದೇಶಿ ಹೆಲ್ಮೇಟ್ ಅಡ್ಡಿ: ಪೊಲೀಸರಿಗೆ ಗೊಂದಲ

ಇತ್ತೀಚೆಗೆ ಟ್ರಾಫಿಕ್ ಪೊಲೀಸರು ಐಎಸ್ಐ ಮಾರ್ಕಿನ ಹೆಲ್ಮೆಟ್ ಗಳ ಬೇಟೆ ಆರಂಭಿಸಿದ್ದಾರೆ. ಐಎಸ್ಐ ಮಾರ್ಕ್ ಇಲ್ಲದ, ಅರ್ಧ ತಲೆ ಮುಚ್ಚುವ ಹೆಲ್ಮೆಟ್ ಧರಿಸಿದವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಪೊಲೀಸರ ದಂಡದಿಂದ ಹಲವು ಪ್ರಯಾಣಿಕರು ಪರದಾಡುವಂತಾಗಿದೆ.

M Krishnappa and his Son Priya Krishna will distribute free helmets on Jan 26

ಇದೇ ಸಂದರ್ಭದಲ್ಲಿ ಎಂ.ಕೃಷ್ಣಪ್ಪ ಮತ್ತು ಪ್ರಿಯಾಕೃಷ್ಣ ಉಚಿತ ಹೆಲ್ಮೆಟ್ ವಿತರಣೆಗೆ ಮುಂದಾಗಿದ್ದಾರೆ. ಈ ಮೂಲಕ ಜನರ ತಲೆ ರಕ್ಷಿಸುವ ಜತೆಗೆ, ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ನೆರವಾಗುವ ಕ್ರಮಕ್ಕೆ ಮುಂದಾಗಿದ್ದಾರೆ.

English summary
Housing minister M Krishnappa and his MLA-son, Priya Krishna, will distribute ISI-standard helmets free of charge at an event in Vijayanagar on January 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X