ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಮಾಗಡಿಯಲ್ಲಿ ಬಾಲಕೃಷ್ಣ ವಿರುದ್ಧ ಜೆಡಿಎಸ್ ನಿಂದ ಎ ಮಂಜು ಕಣಕ್ಕೆ'

|
Google Oneindia Kannada News

ಬೆಂಗಳೂರು, ನವೆಂಬರ್ 10 : ಮಾಗಡಿ ಜಿಲ್ಲಾ ಪಂಚಾಯಿತಿ ಸದಸ್ಯ ಎ. ಮಂಜು (ಮಂಜುನಾಥ್‌) ಕಾಂಗ್ರೆಸ್ ತೊರೆದು ಅಧಿಕೃತವಾಗಿ ಶುಕ್ರವಾರ ಜೆಡಿಎಸ್ ಗೆ ಸೇರಿದರು.

ಮಾಗಡಿಯಲ್ಲಿ ಕಾಂಗ್ರೆಸ್ ಗೆ ಟಾಂಗ್ ನೀಡಿದ ಜೆಡಿಎಸ್, ಎ.ಮಂಜುಗೆ ಗಾಳಮಾಗಡಿಯಲ್ಲಿ ಕಾಂಗ್ರೆಸ್ ಗೆ ಟಾಂಗ್ ನೀಡಿದ ಜೆಡಿಎಸ್, ಎ.ಮಂಜುಗೆ ಗಾಳ

ಬೆಂಗಳೂರಿನ ಶೇಷಾದ್ರಪುರಂನಲ್ಲಿರುವ ಜೆಡಿಎಸ್ ನ ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಎಚ್. ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಎ. ಮಂಜು ಜೆಡಿಎಸ್ ಗೆ ಸೇರ್ಪಡೆಯಾದರು.

Magadi Congress ZP member A Manju Joined JDS today at JP Bhavan Bengaluru

ಈ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, "ಜೆಡಿಎಸ್ ಅಮಾನತು ಶಾಸಕ ಮಾಗಡಿ ಬಾಲಕೃಷ್ಣ ವಿರುದ್ಧ ಜೆಡಿಎಸ್ ನಿಂದ ಈ ಬಾರಿ ಎ.ಮಂಜುನಾಥ್ (ಎ.ಮಂಜು) ಸ್ಪರ್ಧೆ ಮಾಡಲಿದ್ದಾರೆ" ಎಂದು ಘೋಷಿಸಿದರು.

ಮಂಜು ಕಾಂಗ್ರೆಸ್ ತೊರೆದು ಇಂದು ಜೆಡಿಎಸ್ ಸೇರಿದ್ದಾರೆ. ಮಾಗಡಿಯಲ್ಲಿ ಎ.ಮಂಜುನಾಥ್ ಬೃಹತ್ ಸಮಾವೇಶ ನಡೆಸಲಿದ್ದಾರೆ ಎಂದರು.

ಕೈ ಪಾಳಯಕ್ಕೆ ಜಿಗಿದಿರುವ ಜೆಡಿಎಸ್ ಭಿನ್ನಮತೀಯ ಶಾಸಕ ಬಾಲಕೃಷ್ಣ ಅವರಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ನ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಅವರನ್ನು ಜೆಡಿಎಸ್ ಸೆಳೆದಿದೆ.

English summary
Magadi Congress ZP member A Manju Joined JDS today at JP Bhavan Bengaluru. A Manju is th JDS Candidate of 2018 assembly election JDS state president HD Kumaraswamy announced today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X