ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಬಿಡುವುದಿಲ್ಲ!

By Prasad
|
Google Oneindia Kannada News

ಬೆಂಗಳೂರು, ಡಿಸೆಂಬರ್ 27 : ಮಹದಾಯಿಗಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಇಷ್ಟಾದರೂ ನಮ್ಮ ಕೂಗು ಯಾರಿಗೂ ಕೇಳುತ್ತಿಲ್ಲ. ಇದು ಹೀಗೇ ಮುಂದುವರಿದರೆ ಮುಂಬರುವ ವಿಧಾನಸಭೆ ಚುನಾವಣೆಯನ್ನು ಉತ್ತರ ಕರ್ನಾಟಕದಲ್ಲಿ ನಡೆಸಲು ಬಿಡುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ವಿರುದ್ಧ ತಿರುಗಿದ ರೈತರ ಆಕ್ರೋಶಯಡಿಯೂರಪ್ಪ ವಿರುದ್ಧ ತಿರುಗಿದ ರೈತರ ಆಕ್ರೋಶ

ಬೆಂಗಳೂರಿನಲ್ಲಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುಂದೆ ರೈತರು ನಡೆಸುತ್ತಿರುವ ಪ್ರತಿಭಟನೆ 5ನೇ ದಿನಕ್ಕೆ ಕಾಲಿಟ್ಟಿದೆ. ಯಾವುದೇ ಸಂಧಾನಕ್ಕೂ ಬಗ್ಗದ ರೈತರು, ಮಹದಾಯಿ ವಿವಾದಕ್ಕೆ ಒಂದು ಗತಿ ಕಾಣಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಡಿ. 27ರ ಉತ್ತರ ಕರ್ನಾಟಕ ಬಂದ್, ಏನಿರುತ್ತೆ? ಏನಿರಲ್ಲ?ಡಿ. 27ರ ಉತ್ತರ ಕರ್ನಾಟಕ ಬಂದ್, ಏನಿರುತ್ತೆ? ಏನಿರಲ್ಲ?

ಈ ಕುರಿತು ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸುವುದಾಗಿ ರೈತರು ನಿರ್ಣಯ ತೆಗೆದುಕೊಂಡಿದ್ದಾರೆ. ಜೊತೆಗೆ ಚುನಾವಣಾ ಆಯೋಗಕ್ಕೂ ಪತ್ರ ಬರೆಯುವುದಾಗಿ ಹೇಳಿದ್ದಾರೆ.

Mahadayi protest : Will not allow election in North Karnataka

ಉತ್ತರ ಕರ್ನಾಟಕಕ್ಕೆ ನೀರು ತರಲು ಕೇಂದ್ರ, ರಾಜ್ಯ ಸರಕಾರಗಳು, ಅಲ್ಲಿನ ರಾಜಕಾರಣಿಗಳು ಸಂಪೂರ್ಣ ವಿಫಲವಾಗಿದ್ದು, ವಿವಾದ ಬಗೆಹರಿಯದಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯನ್ನು ನಡೆಸದಿರಲು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ರೈತರು ಹೇಳಿದ್ದಾರೆ.

English summary
Mahadayi protest : Will not allow election in North Karnataka. Farmers protesting in Bengaluru have decided to appeal to the election commission not to conduct election in North Karnataka if govt fails to solve the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X