ಬೈಕ್ ನಲ್ಲಿ ಮಗುವಿನ ಶವವನ್ನು ತೆಗೆದುಕೊಂಡು ಹೋದ ಅಸಹಾಯಕ ತಂದೆ
ಅಸ್ಸಾಂನಿಂದ ಬೆಂಗಳೂರಿಗೆ ವಲಸೆ ಬಂದಿರುವ ಆ ವ್ಯಕ್ತಿಯ ಮಗುವಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿತು. ಆಸ್ಪತ್ರೆಯಿಂದ ಮನೆಗೆ ಅಂಬ್ಯುಲೆನ್ಸ್ ವ್ಯವಸ್ಥೆ ಕೂಡ ಆತನಿಗೆ ಸಿಗಲಿಲ್ಲ. ಮುಂದೇನು ಮಾಡಿದರು ಗೊತ್ತಾ?
ಬೆಂಗಳೂರು, ಮೇ 2: ತನ್ನ ಮೂರು ವರ್ಷದ ಸಣ್ಣ ಮಗುವಿನ ಶವವನ್ನು ಕೈಯಲ್ಲಿ ಹಿಡಿದಿದ್ದ ಸಫನ್ ರಾಯ್ ಮನೆಗೆ ತೆಗೆದುಕೊಂಡು ಹೋಗಲು ವಾಹನಕ್ಕಾಗಿ ಕಾದಿದ್ದೇ ಬಂತು. ಕಾರು ಅಪಘಾತವಾಗಿ ಮಗು ಮೃತಪಟ್ಟಿತ್ತು. ಇನ್ನೂ ಆ ಕಾರಿನ ಚಾಲಕ ಪತ್ತೆಯಾಗಿಲ್ಲ. ಆದರೆ ಈ ವ್ಯಕ್ತಿ ಬೆಂಗಳೂರಿನ ಆನೇಕಲ್ ನ ಸರಕಾರಿ ಆಸ್ಪತ್ರೆ ಬಳಿ ಪಟ್ಟ ಪಾಡು ಎಂಥವರ ಹೃದಯ ಕರಗಿಸುವಂತಿತ್ತು.
ಅಸ್ಸಾಂನಿಂದ ವಲಸೆ ಬಂದಿರುವ ರಾಯ್, ತನ್ನ ಮಗ ರಹೀಮ್ ನನ್ನು ಕಳೆದುಕೊಂಡು ಕಂಗಾಲಾಗಿದ್ದರು. ಆದರೆ ಮಗುವಿನ ಶವ ತೆಗೆದುಕೊಂಡು ಹೋಗಲು ಉಚಿತ ಆಂಬ್ಯುಲೆನ್ಸ್ ಸಿಗುತ್ತದೋ ಇಲ್ಲವೋ ಎಂಬ ಬಗ್ಗೆ ಕೂಡ ಅವರಿಗೆ ಮಾಹಿತಿ ಇರಲಿಲ್ಲ. ಜತೆಗೆ ಕನ್ನಡವೂ ಬರುತ್ತಿರಲಿಲ್ಲ. ಆತನ ನೆರವಿಗೆ ಆಸ್ಪತ್ರೆಯ ಸಿಬ್ಬಂದಿ ಕೂಡ ಬಂದಿಲ್ಲ.[ಆತ ಊಟ-ನೀರಿಲ್ಲದೆ ತಂದೆ ಶವದ ಬಳಿಯೇ ಐದು ದಿನ ಇದ್ದ]

ಆಂಬ್ಯುಲೆನ್ಸ್ ಗೆ ಹಣ ನೀಡಬೇಕೇನೋ ಎಂಬ ಕಾರಣಕ್ಕೆ ತನ್ನ ಪರಿಚಯದವರೊಬ್ಬರನ್ನು ಕರೆದು, ತನ್ನ ಮಗನ ದೇಹವನ್ನು ದ್ವಿಚಕ್ರ ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋದರು. ಆತ ಪಟ್ಟ ಪಾಡು, ಸ್ಥಿತಿಯನ್ನು ವಿಡಿಯೋ ಮಾಡಲಾಗಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾದ ಮೇಲೆ ಪೊಲೀಸರು ದೂರು ದಾಖಲಿಸಿ, ರಹೀಮ್ ಶವವನ್ನು ವಾಪಸ್ ಆಸ್ಪತ್ರೆಗೆ ತಂದು, ಮರಣೋತ್ತರ ಪರೀಕ್ಷೆ ನಡೆಸಲಾಯಿತು.['ರಜಾ ಹಾಕ್ತೀನಿ ಅಂದಿದ್ದ ನನ್ನ ಮಗ ಇನ್ಯಾವತ್ತೂ ಮನೆಗೆ ಬರಲ್ಲ']
ಇಂಥ ಪ್ರಕರಣದಲ್ಲಿ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ನೀಡಬೇಕು. ಅದರೆ ಆಸ್ಪತ್ರೆಯವರು ಆ ಕೆಲಸ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಕ್ಕೆ ಶವ ಹಸ್ತಾಂತರಿಸಲಾಯಿತು. ಆ ನಂತರ ಆಂಬ್ಯುಲೆನ್ಸ್ ಒದಗಿಸಲಾಯಿತು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications