ಕಸ ಕಿತ್ತಾಟ: ಮೂರನೇ ದಿನಕ್ಕೆ ಕಾಲಿಟ್ಟ ಉಪವಾಸ
ಬೆಂಗಳೂರು, ಜೂ.16: ನಗರದ ಕಸವನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸುರಿಯುವುದನ್ನು ವಿರೋಧಿಸಿ ಮಂಡೂರು ಗ್ರಾಮಸ್ಥರು ಬೊಮ್ಮನಹಳ್ಳಿ ಗೇಟ್ ಬಳಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಗ್ರಾಮದ ಎಂಟು ಜನ ಅಮರಣಾಂತ ಉಪವಾಸ ಕೈಗೊಂಡಿದ್ದು ಉಳಿದ ಗ್ರಾಮಸ್ಥರು ಸತ್ಯಾಗ್ರಹಕ್ಕೆ ಬೆಂಬಲ ನೀಡುತ್ತಿದ್ದಾರೆ. ಭಾನುವಾರ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎಎಪಿ ಕಾರ್ಯಕರ್ತರು ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು.[ಮಂಡೂರು ಕಸ: ಅನಾರೋಗ್ಯಕ್ಕೆ ಮಹಿಳೆ ಬಲಿ]
ಭಾನುವಾರದ ಸಭೆ ವಿಫಲ: ಭಾನುವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಜೆ 6.30 ರಿಂದ ರಾತ್ರಿ 8.30ರವರೆಗೆ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಬಿಬಿಎಂಪಿ ಮೇಯರ್ .ಎಸ್.ಸತ್ಯನಾರಾಯಣ, ಆಯುಕ್ತ ಲಕ್ಷ್ಮೀನಾರಾಯಣ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಮಂಡೂರು ಗ್ರಾಮಸ್ಥರೊಂದಿಗೆ ನಡೆಸಿದ ಮಾತುಕತೆ ಮತ್ತೆ ವಿಫಲವಾಗಿದೆ.
ಈ ಸಭೆಯಲ್ಲಿ ಸಚಿವರು ಕಸ ಸುರಿಯಲು ಆರು ತಿಂಗಳ ಕಾಲಾವಕಾಶ ನೀಡುವಂತೆ ಕೋರಿದರು. ಮೂರು ತಿಂಗಳು ಅವಕಾಶ ನೀಡಿದರೆ ಮಾತ್ರ ಕಸ ಸುರಿಯಲು ಅವಕಾಶ ನೀಡಲಾಗುವುದು. ಆ ಬಳಿಕ ಶಾಶ್ವತವಾಗಿ ಘಟಕ ಮುಚ್ಚುವುದಾಗಿ ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಲಿಖಿತ ಭರವಸೆ ನೀಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಮತ್ತೊಂದು ಸಭೆ : ಜೂ.16 ಸೋಮವಾರದಂದು ಸಮಸ್ಯೆ ನಿವಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವ ರಾಮಲಿಂಗಾರೆಡ್ಡಿ, ಅಧಿಕಾರಿಗಳ ತಂಡ ಸಭೆ ನಡೆಸಲಿದ್ದಾರೆ.

ಉಪವಾಸ ನಿರತ ಗ್ರಾಮಸ್ಥರು:
ಮಂಡೂರಿನ ಎಂಟು ಜನರು ಅಮರಣಾಂತ ಉಪವಾಸ ಕೈಗೊಂಡಿದ್ದು ಉಳಿದ ಗ್ರಾಮಸ್ಥರು ಸತ್ಯಾಗ್ರಹಕ್ಕೆ ಬೆಂಬಲ ನೀಡುತ್ತಿದ್ದಾರೆ.

ಎಚ್.ಎಸ್.ದೊರೆಸ್ವಾಮಿ ಬೆಂಬಲ:
ಭಾನುವಾರ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪಾಲ್ಗೊಂಡು ಪ್ರತಿಭಟನಗೆ ಬೆಂಬಲ ವ್ಯಕ್ತಪಡಿಸಿದರು.

ಎಎಪಿ ಬೆಂಬಲ:
ಭಾನುವಾರದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿ ಮಂಡೂರಿನ ಜನತೆಗೆ ಬೆಂಬಲ ನೀಡಿದರು.

ಮೂರನೇ ದಿನಕ್ಕೆ ಉಪವಾಸ ಸತ್ಯಾಗ್ರಹ
ಬೊಮ್ಮನಹಳ್ಳಿ ಗೇಟ್ ಬಳಿ ನಡೆಸುತ್ತಿರುವ ಮಂಡೂರು ಗ್ರಾಮಸ್ಥರು ನಡೆಸುತ್ತಿರವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications