ಮಣಿಪುರ ವಿದ್ಯಾರ್ಥಿ ಹಲ್ಲೆ ಆರೋಪಿಗಳು ಅಂದರ್
ಬೆಂಗಳೂರು, ಅ.15: ಮಣಿಪುರ ಮೂಲದ ವಿದ್ಯಾರ್ಥಿ ಸೇರಿದಂತೆ ಮೂವರ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳನ್ನು ಘಟನೆ ನಡೆದ ಕೆಲ ಗಂಟೆಗಳಲ್ಲೇ ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ರಾತ್ರಿ ಕೊತ್ತನೂರು ಬಸ್ ನಿಲ್ದಾಣದ ಬಳಿ ಥಡೊವ್ ವಿದ್ಯಾರ್ಥಿ ಸಂಘಟನೆ ಮುಖಂಡ ಮೈಕಲ್ ಲಾಜಾಥಾಂಗ್ ಸೇರಿದಂತೆ ಮೂವರ ಮೇಲೆ ಮೂವರು ಕುಡುಕರು ಹಲ್ಲೆ ನಡೆಸಿದ ಘಟನೆ ನಡೆದಿತ್ತು.

ಈ ಸಂಬಂಧ ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ದಾಖಲಿಸಿಕೊಂಡಿದ್ದರು. ಬುಧವಾರ ಮಧ್ಯಾಹ್ನದ ವೇಳೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.
ಏನಿದು ಪ್ರಕರಣ: ಕೊತ್ತನೂರು ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಆಹಾರ ಮಳಿಗೆಯಲ್ಲಿ ಮೈಕಲ್ ಹಾಗೂ ಇನ್ನಿಬ್ಬರು ಊಟ ಮಾಡುತ್ತಿದ್ದರು. ರಾತ್ರಿ 10.30 ಸುಮಾರಿಗೆ ಅಲ್ಲೇ ರಸ್ತೆ ಬದಿಯಲ್ಲಿ ಗುಂಪಿನಲ್ಲಿ ಒಂದಷ್ಟು ಜನ ಸ್ಥಳೀಯರು ನಿಂತಿದ್ದರು. ಇವರಿದ್ದ ಬಳಿಗೆ ಮೂವರು ಕುಡುಕರು ಬಂದಿದ್ದಾರೆ. ಮೈಕಲ್ ಹಾಗೂ ಸ್ನೇಹಿತರು ಮಣಿಪುರಿ ಭಾಷೆಯಲ್ಲಿ ಮಾತನಾಡುತ್ತಿದ್ದನ್ನು ಕಂಡು ಹತ್ತಿರಕ್ಕೆ ಬಂದವನ್ನೊಬ್ಬ ಮೈಕಲ್ ಸ್ನೇಹಿತನ ಕೆನ್ನೆ ಊದಿಸಿದ್ದಾನೆ.
ನಾವೇನು ನಿಮ್ಮ ಬಗ್ಗೆ ಮಾತನಾಡುತ್ತಿರಲಿಲ್ಲ ಎಂದು ಮಣಿಪುರಿಗಳು ವಾದಿಸಿದ್ದಾರೆ. ಮಾತಿಗೆ ಮಾತು ಬೆಳೆದಿದೆ. ಇಲ್ಲಿ ನೆಲೆಸಿರುವ ನೀವು ಕನ್ನಡದಲ್ಲಿ ಮೊದಲು ಮಾತನಾಡಿ ಆಮೇಲೆ ಮಿಕ್ಕಿದ್ದು ಮಾತನಾಡೋಣ ಎಂದು ಕೂಗಾಡಿದ್ದಾರೆ. ರಸ್ತೆ ಬದಿ ನಿಂತಿದ್ದ ಇನ್ನೂ ಕೆಲವರು ಬಂದು ಸೇರಿದ್ದಾರೆ.
Alok Kumar,Addtnl CP on student attacked in B'lore : 3 ppl have been arrested,will take stringent action against them pic.twitter.com/NaLEkzZLBf
— ANI (@ANI_news) October 15, 2014 ಈ ಸಂದರ್ಭದಲ್ಲಿ ಮೈಕಲ್ ಮೇಲೆ ಹಲ್ಲೆ ನಡೆದಿದೆ. ನಂತರ ಮಣಿಪುರಿಗಳು ಬೈಕ್ ಹತ್ತಿ ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದು, ನಮ್ಮ ಮೇಲೆ ಹಲ್ಲೆ ಮಾಡಿದವರು ಚೆನ್ನಾಗಿ ಕುಡಿದಿದ್ದರು ನಾವು ಏನು ಹೇಳಿದರೂ ಅವರಿಗೆ ಅರ್ಥವಾಗುತ್ತಿರಲಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದು ಪೀಡಿಸಿದರು ಎಂದು ದೂರಿನಲ್ಲಿ ಹೇಳಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಣಿಪುರದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಬಾಕ್ಸರ್ ಮೇರಿ ಕೋಮ್ ಪ್ರತಿಕ್ರಿಯೆ:
Mary Kom,Boxer on Manipuri student attacked in B'lore : Feels sad to hear this,such incidents shouldn't happen pic.twitter.com/zUiKIpdmFb
— ANI (@ANI_news) October 15, 2014 -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications