ಸಿಲಿಂಡರ್ ಸ್ಫೋಟ, ಕಟ್ಟಡ ಕುಸಿತ, 7 ಮಂದಿ ದುರ್ಮರಣ
ಬೆಂಗಳೂರು, ಅಕ್ಟೋಬರ್ 16: ಈಜಿಪುರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಕ್ಕೆ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೇರಿದೆ. ಘಟನಾ ಸ್ಥಳಕ್ಕೆ ಇದೀಗ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ರಾಮಲಿಂಗಾ ರೆಡ್ಡಿ ಹೇಳಿಕೆ: ಇದು ಗುಣೇಶ್ ಎಂಬುವವರಿಗೆ ಸೇರಿರುವ ಕಟ್ಟಡ. ತೀರಾ ಹಳೆ ಕಟ್ಟಡವೇನಲ್ಲ, 20 ವರ್ಷ ಹಳೆಯದಿರಬಹುದು. ಮಳೆ ಹಾನಿಯಿಂದ ಕಟ್ಟಡ ಕುಸಿದಿಲ್ಲ. ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದಿರುವ ಸಾಧ್ಯತೆಯಿದೆ. ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ 6 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸೈಂಟ್ ಜಾನ್ಸ್ ಹಾಗೂ ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬದವರಿಗೆ ಸರ್ಕಾರದ ವತಿಯಿಂದ ಪರಿಹಾರ ಧನ ಸಿಗಲಿದೆ.

* ಮೃತರನ್ನು ಕಲಾವತಿ (38), ರವಿಚಂದ್ರನ್ ಎಂದು ಗುರುತಿಸಲಾಗಿದೆ. ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಅಗ್ನಿಶಾಮಕದಳದ 3 ಸಿಬ್ಬಂದಿಗಳ ಮೇಲೆ ಮನೆಯ ಗೋಡೆ ಕುಸಿದಿದ್ದು, ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಏನು ಕಾರಣ ಎಂಬುದು ಇನ್ನೂ ಪತ್ತೆಯಾಗಿಲ್ಲ.

* ಮೂರು ಅಂತಸ್ತಿನ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮನೆಯಲ್ಲಿದ್ದ ಉಳಿದ 6 ಜನರನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
* ಕಟ್ಟಡದ ಅವಶೇಷಗಳಡಿಯಲ್ಲಿ ಇನ್ನೂ ಅನೇಕ ಮಂದಿ ಸಿಲುಕಿರುವ ಸಾಧ್ಯತೆಗಳಿವೆ.

* ಈಜಿಪುರದ ಚರ್ಚ್ ರಸ್ತೆಯ 7ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಡೆದ ಸ್ಫೋಟದ ಪರಿಣಾಮ ಅಕ್ಕಪಕ್ಕದ ಕಟ್ಟಡಗಳು ಕುಸಿತವಾಗಿದೆ.
* ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications