ಹಲ್ಲೆ ನಡೆಸಿರುವುದಾಗಿ ತಪ್ಪೊಪ್ಪಿಕೊಂಡ ಮೊಹಮ್ಮದ್ ನಲಪಾಡ್
ಬೆಂಗಳೂರು, ಫೆಬ್ರವರಿ 20: ತಾವು ಹಲ್ಲೆ ಮಾಡಿರುವುದು ಸತ್ಯ ಎಂದು ಮೊಹಮ್ಮದ್ ನಲಪಾಡ್ ಅವರು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ತಪ್ಪೊಪ್ಪಿಗೆ ಬಿಟ್ಟರೆ ಇನ್ನಾವುದೇ ಪ್ರಶ್ನೆಗೆ ಅವರು ಸರಿಯಾಗಿ ಉತ್ತರಿಸಿಲ್ಲ ಎನ್ನಲಾಗಿದೆ.
ಬಂಧಿತ ಮೊಹಮ್ಮದ್ ನಲಪಾಡ್ ಹಾಗೂ ಸಹಚರರನ್ನು ಯುಬಿಸಿಟಿಯ ಫರ್ಜಿ ಹೊಟೇಲ್ಗೆ ಕರೆದು ಕೊಂಡು ಹೋಗಿ ಪೊಲೀಸರು ಮಹಜರು ನಡೆಸಿದರು. ಅಲ್ಲಿನ ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲನೆ ನಡೆಸಿದರು.
ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡ ಮೊಹಮ್ಮದ್ ನಲಪಾಡ್ ಅವರು ಪೊಲೀಸರ ಇನ್ನಾವುದೇ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿಲ್ಲ ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿರುವುದು ತಿಳಿದುಬಂದಿದೆ.

ಮೊಹಮ್ಮದ್ ನಲಪಾಡ್ ಜೊತೆಗೆ ಆತನ ಸಹಚರರಾದ ಅರುಣ್ ಬಾಬು, ಮಂಜುನಾಥ, ಅಶ್ರಪ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಅವರುಗಳನ್ನು ಪೊಲೀಸರು ಬಂಧಿಸಿದ್ದಾರೆ. ಫರ್ಜಿ ಹೊಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತಮ್ಮ ಸುಪರ್ಧಿಗೆ ಪಡೆದಿದ್ದಾರೆ.
ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ಅವರಿಂದ ಹಲ್ಲೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ರಾಜ್ಯ ಗೃಹಮಂತ್ರಿ ರಾಮಲಿಂಗಾ ರೆಡ್ಡಿ ಅವರು ಇಂಥಹಾ ಗೂಂಡಾಗಳನ್ನು ಬಂಧಿಸಿ ಒಳಗೆ ಹಾಕಬೇಕು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹಾ ಗೂಂಡಾಗಳಿಂದ ಪಕ್ಷದ ವರ್ಚಸ್ಸು ಹಾಳಾಗುತ್ತದೆ ಇಂಥಹವರನ್ನು ಜೈಲಿಗೆ ಅಟ್ಟಬೇಕು ಎಂದಿದ್ದಾರೆ.
ಪೊಲೀಸ್ ಉನ್ನತ ಅಧಿಕಾರಿಗಳಿಗೆ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಸೂಚಿಸಿರುವುದಾಗಿ ಹೇಳಿದ್ದಾರೆ.
ವಿಧಾನಸಭಾ ಕಲಾಪದಲ್ಲಿಯೂ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಈ ವಿಷಯ ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದರು. ಇದು ಮಾತ್ರವಲ್ಲದೆ ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಅವರ ಗೂಂಡಾ ಗಿರಿಯ ಬಗ್ಗೆಯೂ ಜಗದೀಶ್ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಮೊಹಮ್ಮದ್ ಹ್ಯಾರಿಸ್ ಮೇಲೆ ಕ್ರಮ ಜರುಗಿಸಲಾಗುತ್ತಿದ್ದು, ನಾರಾಯಣಸ್ವಾಮಿ ಮೇಲೆ ಕೂಡಲೇ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಹೇಳಿದರು.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications