ಹುಡುಗರಿಗೂ ತೆರೆದುಕೊಂಡ ಮೌಂಟ್ ಕಾರ್ಮೆಲ್ ಬಾಗಿಲು!
ಬೆಂಗಳೂರು ಜುಲೈ 16: ನಗರದ ಜನಪ್ರಿಯ ಮಹಿಳಾ ಕಾಲೇಜುಗಳಲ್ಲಿ ಒಂದೆನಿಸಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಹುಡುಗರಿಗೂ ವ್ಯಾಸಂಗ ಮಾಡುವ ಅವಕಾಶ ಲಭ್ಯವಾಗುವ ಕಾಲ ಬಂದಿದೆ. ಸ್ನಾತಕೋತ್ತರ ಪದವಿ ಮಾಡಬಯಸುವ ವಿದ್ಯಾರ್ಥಿಗಳಿಗೆ ಕಾಲೇಜು ಬಾಗಿಲು ತೆರೆಯುವ ಸಾಧ್ಯತೆಗಳಿವೆ.
ಮುಂಬರುವ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತವರ ಪದವಿ ವಿಷಯಕ್ಕೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಬಯಸಿದ್ದು, ಇದಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳ ಅನುಮತಿ ಕೋರಲಾಗಿದೆ ಎಂದು ಕಾಲೇಜಿನ ಅರ್ಪಣಾ ಹೇಳಿದ್ದಾರೆ.
ಈ ಬಗ್ಗೆ ಅನುಮತಿ ಕೋರಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ವಿವಿ ಕುಲಪತಿಗಳಿಗೆ ಮನವಿ ಪತ್ರವನ್ನು ಮಾರ್ಚ್ ತಿಂಗಳಲ್ಲಿ ಕಳಿಸಲಾಗಿದೆ. ವಿವಿಗಳ ಕೌನ್ಸಿಲ್ ಸಭೆಯಲ್ಲೂ ಇದಕ್ಕೆ ಅನುಮತಿ ಸಿಕ್ಕಿದೆ. ಎಲ್ಲವೂ ಸರಿಯಾಗಿ ಕೂಡಿ ಬಂದರೆ 1948ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಹುಡುಗಿಯರ ಕಾಲೇಜಿನಲ್ಲಿ ಹುಡುಗರು ವಿದ್ಯಾಭ್ಯಾಸ ನಾಂದಿ ಹಾಡಲಾಗುತ್ತದೆ. [ಮಾಯವಾಗಲಿದೆ ಪುಟಗಟ್ಟಲೇ ಬರೆಯುವ ಪರಿಪಾಠ]

ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರವೇಶಾತಿ ಅನುಪಾತ ಬಗ್ಗೆ ಕಾಲೇಜು ಮಂಡಳಿ ನಿರ್ಧರಿಸಲಿದೆ. ಈ ಬಗ್ಗೆ ವಿವಿ ಕೂಡಾ ಅನುಮತಿ ನೀಡಿದೆ. ವಸಂತ ನಗರ ಕ್ಯಾಂಪಸ್ ನಲ್ಲಿ ತರಗತಿಗಳು ನಡೆಯಲಿವೆ. ಕಾಲೇಜಿಗೆ ಸ್ವಾಯುತ್ತತೆ ಇದ್ದರೂ ವಿವಿಯ್ ಪೂರ್ವಾನುಮತಿ ಪಡೆಯಬೇಕಾಗುತ್ತದೆ ಎಂದು ಪ್ರಿನಿಸಿಪಾಲ್ ಅರ್ಪಣಾ ಹೇಳಿದ್ದಾರೆ.
ಪ್ರವೇಶಾತಿ ಅನುಪಾತದಲ್ಲಿ ವಿದ್ಯಾರ್ಥಿನಿಗಳಿಗೆ ಹೆಚ್ಚಿನ ಪಾಲು ಸಿಕ್ಕರೆ ಸಾಕು, ವಿದ್ಯಾರ್ಥಿಗಳ ಜೊತೆ ವ್ಯಾಸಂಗದಿಂದ ನಮಗೇನೂ ತೊಂದರೆಯಿಲ್ಲ ಎಂದು ಕಾಲೇಜಿನ ವಿದ್ಯಾರ್ಥಿನಿ ಸೌಮ್ಯ ತಮ್ಮ ಅಭಿಪ್ರಾಯ ಹೇಳಿದ್ದಾರೆ.
ಇಲ್ಲಿ ತನಕ ಕಾಲೇಜಿನ ಗೇಟ್ ಹೊರಗೆ ಸುತ್ತುತ್ತಿದ್ದ ಬೈಕುಗಳು ಹಾಗೂ ಅದರ ಸವಾರರು ಕಾಲೇಜಿನೊಳಗೆ ಅಧಿಕೃತವಾಗಿ ಎಂಟ್ರಿ ಕೊಡಬಹುದು. ಮೌಂಟ್ ಕಾರ್ಮೆಲ್ ಕಾಲೇಜಿನ ಬಗ್ಗೆ ಇನ್ನಷ್ಟು ವಿವರಗಳಿಗೆ ವೆಬ್ ಸೈಟ್ ನೋಡಿ (ಒನ್ ಇಂಡಿಯಾ ಸುದ್ದಿ)
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications