ಬಡಗನಾಡು ಹಾಸ್ಟೆಲಿಗೆ 25 ಲಕ್ಷ ಕೊಟ್ಟ ಅನಂತಕುಮಾರ್
ಬೆಂಗಳೂರು, ಜೂನ್ 9: ನರೇಂದ್ರ ಮೋದಿ ಸಂಪುಟದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿನ್ನೆ ಭಾನುವಾರ ಬೆಂಗಳೂರಿಗೆ ಬಂದಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತಕುಮಾರ್ ಅವರು ತಮ್ಮ ವ್ಯಾಪ್ತಿ ಮೀರಿ ಧನ ಸಹಾಯ ಮಾಡಿದ್ದಾರೆ.
ನಗರದ ಶೇಷಾದ್ರಿ ಪುರಂನಲ್ಲಿರುವ ಬಡಗನಾಡು ಸಂಘದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ 'ಅಮೃತಭವನ'ದ ಉದ್ಘಾಟನಾ ಸಮಾರಂಭದಲ್ಲಿ ದಂಪತಿ ಸಮೇತ ಅವರು ಪಾಲ್ಗೊಂಡಿದ್ದರು. ಶೇಷಾದ್ರಿ ಪುರಂ ಬಡಾವಣೆಯು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಆದಾಗ್ಯೂ ಸಂಘದ ಪ್ರಾಶಸ್ತ್ಯ ಮತ್ತು ಸಾಧನೆಯನ್ನು ಗಮನಿಸಿ ಕೇಂದ್ರ ಸಚಿವರ ಅನಂತ್ ಅವರು ಬಡಗನಾಡು ಸಂಘದ ವಿದ್ಯಾರ್ಥಿ ನಿಲಯಕ್ಕೆ ಸಂಸದರ ನಿಧಿಯಿಂದ ರು. 25 ಲಕ್ಷ ಅನುದಾನ ನೀಡುವುದಾಗಿ ಹೇಳಿದರು.

ಬಡಗನಾಡು ಸಂಘ ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ
ಬಡಗನಾಡು ಸಂಘಕ್ಕೆ ಹಲವು ದಶಕಗಳಿಂದಲೂ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುತ್ತಾ ಬಂದಿದೆ. ಸಂಘವು ತನ್ನ ಸಮುದಾಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ನಿಲಯದ ಮೂಲಕ ಅನುಕೂಲ ಕಲ್ಪಿಸಲು ಕೊಡುತ್ತಿದೆ. ಇದನ್ನು ಮತ್ತಷ್ಟು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ಆದ್ದರಿಂದ ಈ ಕ್ಷೇತ್ರದ ಸಂಸದರಾದ ಪಿಸಿ ಮೋಹನ್ ಜತೆ ಮಾತುಕತೆ ನಡೆಸಿ ಸಂಸದರ ನಿಧಿಯಿಂದ 25 ಲಕ್ಷ ಅನುದಾನ ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಅನಂತ್ ಭರವಸೆ ನೀಡಿದ್ದಾರೆ.

ಸಚ್ಚಿದಾನಂದ ಸರಸ್ವತಿ ಶ್ರೀಗಳು ಆಶೀರ್ವಚನ
ಅಮೃತ ಭವನ ಉದ್ಘಾಟಿಸಿದ ಹರಿಹರಪುರ ಶ್ರೀಮಠದ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಶ್ರೀಗಳು ಆಶೀರ್ವಚನ ನೀಡಿ, ಮನುಷ್ಯನ ಪ್ರಜ್ಞಾಶಕ್ತಿ ನಿಂತ ನೀರಾಗಬಾರದು. ಎಂಥಹದೇ ಸಂದರ್ಭದಲ್ಲೂ ಉತ್ಸಾಹ, ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ನಿಮ್ಮ ಬಗ್ಗೆಯೇ ನಿಮ್ಮಲ್ಲಿ ವಿಶ್ವಾಸವಿರಬೇಕೆಂದು ಹೇಳಿದರು.

ಸ್ಥಳೀಯ ಶಾಸಕ ಸಚಿವ ದಿನೇಶ್ ಗುಂಡೂರಾವ್
ಸ್ಥಳೀಯ ಶಾಸಕ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಬಡಗನಾಡು ಸಂಘಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ನೆರವು ನೀಡಲು ತಾವು ಸಿದ್ಧವಿರುವುದಾಗಿ ಹೇಳಿದರು. ಶಾಸಕ ಡಾ ಸಿ ಎನ್ ಅಶ್ವತ್ಥ ನಾರಾಯಣ, ಸಂಘದ ಸಾಧನೆಯನ್ನು ಮೆಚ್ಚಿ ಮಾತನಾಡಿದರು.

ಸಂಘದ ಸದಸ್ಯ ಮಹಾನಗರ ಪಾಲಿಕೆ ಮೇಯರ್ ಸತ್ಯನಾರಾಯಣ
ಸಂಘದ ಸದಸ್ಯರಲ್ಲೊಬ್ಬರಾದ ಮಹಾನಗರ ಪಾಲಿಕೆ ಮೇಯರ್ ಸತ್ಯನಾರಾಯಣ ಅವರು ಮಾತನಾಡಿ ಸಂಘದ ಭವನ ನಿರ್ಮಾಣಕ್ಕೆ ಸಹಕಾರ ನೀಡಿದ ಸಮುದಾಯದ ಜನರಿಗೆ ಕೃತಜ್ಞತೆ ತಿಳಿಸಿದರು. ಸಂಘದ ಗೌರವ ಅಧ್ಯಕ್ಷ ಬಿಎಸ್ ರವಿಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘ ಬೆಳೆದು ಬಂದ ಹಾದಿಯನ್ನು ಸ್ಮರಿಸಿದರು.

'ಬಡಗನಾಡು ಬ್ರಾಹ್ಮಣರ ಇತಿಹಾಸ' ಪುಸ್ತಕ ಬಿಡುಗಡೆ
ಪಾಲಿಕೆ ಸದಸ್ಯ ಗೋಪಾಲಕೃಷ್ಣ, ಸಂಘದ ಪದಾಧಿಕಾರಿಗಳಾದ ಜಿಎಸ್ ನಾಗೇಶ್, ಎನ್ಎಲ್ ಚಿದಾನಂದ, ಎಚ್ಎಸ್ ನಾಗರಾಜ್, ಟಿಆರ್ ಕೃಷ್ಣಮೂರ್ತಿ, ಎಂಎನ್ ಗೋಪಿನಾಥ್ ಮತ್ತಿತರರು ಹಾಜರಿದ್ದರು. ಇದೇ ವೇಳೆ 'ಬಡಗನಾಡು ಬ್ರಾಹ್ಮಣರ ಇತಿಹಾಸ' ಪುಸ್ತಕವನ್ನು ಶ್ರೀಗಳು ಬಿಡುಗಡೆ ಮಾಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications