ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀರಾಮುಲಿಗೆ ಚೆಕ್ ಬೌನ್ಸ್ ಪ್ರಕರಣದಿಂದ ಮುಕ್ತಿ

By Mahesh
|
Google Oneindia Kannada News

ಬೆಂಗಳೂರು, ನವೆಂಬರ್ 09: ಬಳ್ಳಾರಿಯ ಸಂಸದ ಬಿ ಶ್ರೀರಾಮುಲು ಅವರಿಗೆ ಚೆಕ್ ಬೌನ್ಸ್ ಪ್ರಕರಣದಿಂದ ಮುಕ್ತಿ ಸಿಕ್ಕಿದೆ. 13ನೇ ಎಸಿಎಂಎಂ ನ್ಯಾಯಾಲಯವು ಈ ಪ್ರಕರಣದಿಂದ ಶ್ರೀರಾಮುಲು ಅವರನ್ನು ಖುಲಾಸೆಗೊಳಿಸಿದೆ.

2013ರಲ್ಲಿ ಮೈಸೂರಿನ ಎಲ್.ಸೋಮಣ್ಣ ಎಂಬುವರು ಶ್ರೀರಾಮುಲು ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಆದರೆ, ಆರೋಪ ಸಾಬೀತುಪಡಿಸಲು ಸರಿಯಾದ ಸಾಕ್ಷಿ ಆಧಾರಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದರು. ಹೀಗಾಗಿ, ಪ್ರಕರಣದಿಂದ ಶ್ರೀರಾಮುಲು ಅವರನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿದೆ.

MP B Sriramulu acquitted of charges by ACMM court

ಏನಿದು ಪ್ರಕರಣ: 'ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಅಧ್ಯಕ್ಷ ಶ್ರೀರಾಮುಲು ಅವರು ನನ್ನಿಂದ 2.96 ಕೋಟಿ ರು ಸಾಲ ಪಡೆದಿದ್ದರು. ಸಾಲ ತೀರಿಸಲು ಚೆಕ್ ನೀಡಿದ್ದರು. ಆದರೆ, ಬ್ಯಾಂಕಿನಲ್ಲಿ ಚೆಕ್ ಕ್ಲಿಯರ್ ಆಗದೆ ಚೆಕ್ ಬೌನ್ಸ್ ಆಗಿತ್ತು' ಎಂದು ಮೈಸೂರು ಎಲ್ ಸೋಮಣ್ಣ ಆರೋಪ ಹೊರೆಸಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಂದಿದ್ದು, ಶ್ರೀರಾಮುಲು ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.

ಇನ್ನೊಂದು ಪ್ರಕರಣದಲ್ಲಿ ಶ್ರೀರಾಮುಲು: ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದಾಗ, ಬಳ್ಳಾರಿ ಹೊರವಲಯದ ಬೆಳಗಲಿ ಪ್ರದೇಶದಲ್ಲಿ 27.25 ಎಕರೆ ಭೂಮಿ ಖರೀದಿಸಿದ್ದರು. ತಮ್ಮ ಪ್ರಭಾವ ಮತ್ತು ನಕಲಿ ದಾಖಲೆ ಉಪಯೋಗಿಸಿಕೊಂಡು, ರಾಮುಲು ಭೂಮಿ ಖರೀದಿಸಿದ್ದಾರೆ ಎಂಬುದು ಆರೋಪಿಸಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
B Sriramulu, BJP MP from Ballari, in a Rs 2.97 crore cheque bounce case. Sriramulu had issued the cheque to L Somanna, president of Mysuru unit BSR (Congress) in 2013.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X