ಫ್ರಾನ್ಸ್ ರಾಯಭಾರಿ ಕಚೇರಿಗೆ ಪತ್ರ ಬರೆದಿದ್ದು ರಫೀಕ್?
ಬೆಂಗಳೂರು, ಜನವರಿ 25 : ಬೆಂಗಳೂರಿನಲ್ಲಿರುವ ಫ್ರಾನ್ಸ್ ರಾಯಭಾರಿ ಕಚೇರಿಗೆ ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ. ಐಎಸ್ಐಎಸ್ ಶಂಕಿತ ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಎನ್ಐಎ ರಾಯಭಾರ ಕಚೇರಿಗೆ ಪತ್ರ ಬರೆದಿರುವುದು ರಫೀಕ್ ಅಹಮದ್ ಎಂದು ಶಂಕಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಸಮೀಪ ಶನಿವಾರ ರಫೀಕ್ ಅಹಮದ್ ಬಂಧಿಸಲಾಗಿದೆ. ಪೊಲೀಸರು ಬಂಧಿಸಲು ಹೋದಾಗ ಅವರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿ, ರಫೀಕ್ ಪರಾರಿಯಾಗಲು ಯತ್ನಿಸಿದ್ದ. ಯುವಕರನ್ನು ಉಗ್ರ ಸಂಘಟನೆಗೆ ನೇಮಕ ಮಾಡಿಕೊಳ್ಳುತ್ತಿದ್ದ ರಫೀಕ್, ದೇಶಾದ್ಯಂತ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. [ಬೆಂಗಳೂರಿನ ಫ್ರಾನ್ಸ್ ರಾಯಭಾರಿ ಕಚೇರಿಗೆ ಬೆದರಿಕೆ]

ಅಲ್ಖೈದಾ ಉಗ್ರ ಸಂಘಟನೆ ಹೆಸರಿನಲ್ಲಿ ಜನವರಿ 11ರಂದು ಬೆಂಗಳೂರಿನಲ್ಲಿರುವ ಫ್ರಾನ್ಸ್ ರಾಯಭಾರ ಕಚೇರಿಗೆ ಪತ್ರ ಬಂದಿತ್ತು. ಪತ್ರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲ್ಲಾಂಡೆ ಅವರು ಬರುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಲಾಗಿತ್ತು. ಚೆನ್ನೈನಿಂದ ಈ ಪತ್ರವನ್ನು ಪೋಸ್ಟ್ ಮಾಡಲಾಗಿತ್ತು. [ಚಿತ್ರಗಳು ಹೊಲ್ಲಾಂಡೆ ಮೊದಲ ದಿನದ ಭಾರತ ಪ್ರವಾಸ]
ರಫೀಕ್ ಈ ಪತ್ರವನ್ನು ಚೆನ್ನೈನಿಂದ ಪೋಸ್ಟ್ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ರಾಯಭಾರ ಕಚೇರಿಗೆ ಬಂದ ಪತ್ರದಲ್ಲಿ ಭಾರತದ ಭೂಪಟವಿದೆ ಮತ್ತು ಅಲ್ಖೈದಾ ಎಂದು ಬರೆದಿದೆ. ಶನಿವಾರ ರಫೀಕ್ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ಅವರ ಮನೆಯಲ್ಲಿ ಇಂತಹ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ದರಿಂದ, ರಫೀಕ್ ಪತ್ರ ಬರೆದಿರಬಹುದು ಎಂದು ಶಂಕಿಸಲಾಗಿದೆ.
ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲ್ಲಾಂಡೆ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಭಾನುವಾರ ಭಾರತಕ್ಕೆ ಆಗಮಿಸಿದ್ದಾರೆ. ಜನವರಿ 26ರ ಮಂಗಳವಾರ ಅವರು ನವದೆಹಲಿಯಲ್ಲಿ 67ನೇ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications