ಮೈಸೂರು ದಿವಾನರ ದ್ರೋಹದಿಂದ ತ.ನಾಡಿಗೆ ಅನುಕೂಲವಾಯಿತು: ದೇವೇಗೌಡ
ಮಾಗಡಿ (ರಾಮನಗರ ಜಿಲ್ಲೆ), ಮಾರ್ಚ್ 12 : ಮೈಸೂರು ದಿವಾನರು ಕನ್ನಡ ನಾಡಿಗೆ ಮಾಡಿದ ದ್ರೋಹದಿಂದ ತಮಿಳುನಾಡಿಗೆ ಕಾವೇರಿ ನೀರು ವರದಾನದಂತೆ ಸಿಕ್ಕಿತಾ? ಹೌದು, ಈ ಬಗ್ಗೆ ಮಾಜಿ ಪ್ರಧಾನಿ- ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾತನಾಡಿದ್ದಾರೆ.
ಮೈಸೂರಿನ ರಾಜವಂಶಸ್ಥರ ಮಾನವೀಯ ಗುಣಗಳನ್ನು ದುರುಪಯೋಗ ಮಾಡಿಕೊಂಡ ದಿವಾನರು, ತಮಿಳುನಾಡಿಗೆ ಕಾವೇರಿ ನೀರಿನ ವಿಚಾರದಲ್ಲಿ ಅನುಕೂಲ ಮಾಡಿಕೊಟ್ಟರು ಎಂದು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಆರೋಪ ಮಾಡಿದರು.
ಕಾವೇರಿ ತೀರ್ಪಿಗೆ ಕೇಂದ್ರ ಮರು ಪರಿಶೀಲನಾ ಅರ್ಜಿ ಹಾಕಲಿ: ದೇವೇಗೌಡ ಸಲಹೆ
ಆಗಿನ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಿದ್ದ ಕಾಮರಾಜ್ ನಾಡಾರ್ ಗೆ ಪತ್ರ ಬರೆದು, ಕಾವೇರಿ ನದಿ ನೀರನ್ನು ಎಷ್ಟು ಬೇಕಾದರೂ ಬಳಸಿಕೊಳ್ಳಿ. ಆದರೆ ನಮಗೆ ಭತ್ತ ಕೊಡಿ ಎಂದು ಪತ್ರ ಬರೆದಿದ್ದರು. ಆ ಪತ್ರ ಕೂಡ ತಮಿಳುನಾಡಿಗೆ ಅನುಕೂಲ ಮಾಡಿಕೊಟ್ಟಿತು ಎಂದು ದೇವೇಗೌಡರು ಹೇಳಿದರು.
ತಮಿಳುನಾಡು, ಆಂಧ್ರದಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿವೆ. ಆದ್ದರಿಂದ ಎಷ್ಟೇ ಗದ್ದಲ ಮಾಡಿದರೂ ನಾಡಿನ ನದಿಗಳ ನೀರನ್ನು ಹೆಚ್ಚು ಬಳಸಿಕೊಳ್ಳಲು ಸಾಧ್ಯವಾಗಿದೆ. ಆದ್ದರಿಂದ ಇಲ್ಲೂ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಧಿಕಾರಕ್ಕೆ ಬರಬೇಕಿದೆ. ಆ ಮೂಲಕ ಕನ್ನಡ ನಾಡಿಗೆ ನ್ಯಾಯ ಸಿಗುವಂತೆ ಮಾಡಬೇಕಿದೆ ಎಂದರು.