ಮಲ್ಲೇಶ್ವರಂ ಟು ನಾಗಸಂದ್ರ= 25 ನಿಮಿಷ
ಬೆಂಗಳೂರು, ಮೇ. 1: ಉದ್ಯಾನ ನಗರಿ ಮತ್ತೊಂದು ಹೆಮ್ಮೆಗೆ ಪಾತ್ರವಾಗಿದೆ. ನಮ್ಮ ಮೆಟ್ರೋ ರೀಚ್ 3 ಬಿಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ.
ಪೀಣ್ಯ ಕೈಗಾರಿಕಾ ಪ್ರದೇಶದಿಂದ ನಾಗಸಂದ್ರವರೆಗೆ ಸಂಚರಿಸಲಿರುವ ಮೆಟ್ರೋಗೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು, ಸದಾನಂದಗೌಡ ಗ್ರೀನ್ ಸಿಗ್ನಲ್ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು. ಮೆಟ್ರೋ ಸಂಚಾರ ಮೇ. 1 ರಿಂದಲೇ ಆರಂಭವಾಗಿದೆ.
ಧಿಕ್ಕಾರ ಕೂಗಿದ ನಾಗರೀಕರು
ವೇದಿಕೆಯಲ್ಲಿ ಗಣ್ಯರು ಮಾತನಾಡುತ್ತಿದ್ದರೆ ಮತ್ ತೊಂದೆಡೆ ಪ್ರತಿಭಟನೆ ಕಂಡುಬಂದಿತು. ಸಾಮಾಜಿಕ ಕಾರ್ಯಕರ್ತ ಕಾರ್ಯಕರ್ತ ನರಸಿಂಹಮೂರ್ತಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಮೆಟ್ರೋ ನಿಲ್ದಾಣದಲ್ಲಿ ಮೊದಲು ಮೂಲಸೌಕರ್ಯ ಕಲ್ಪಿಸಿ ಎಂದು ಆಗ್ರಹಿಸಿದರು. ಮೆಟ್ರೋ ನಿರ್ಮಾಣಕ್ಕೆ ಜಾಗ ವಶಪಡಿಸಿಕೊಂಡ ಸಂತ್ರಸ್ತರಿಗೆ ಇನ್ನು ಪರಿಹಾರ ಸಿಕ್ಕಿಲ್ಲ. ತೋರಿಕೆಯ ಉದ್ಘಾಟನೆ ಬೇಕಾಗಿಲ್ಲ. ಮೆಟ್ರೋ ನಿಲ್ದಾಣಗಳಲ್ಲಿ ಕುಡಿಯುವ ನೀರಿಲ್ಲ ಎಂಬ ಆರೋಪಗಳನ್ನು ಮಾಡಿದ ಪ್ರತಿಭಟನಾಕಾರರು ವೇದಿಕೆಗೆ ನುಗ್ಗಲು ಯತ್ನಿಸಿದರು. ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದರು.
|
25 ನಿಮಿಷ ಸಾಕು
ನಾಗಸಂದ್ರ ನಿಲ್ದಾಣದಲ್ಲಿ ರೈಲಿಗೆ ಚಾಲನೆ ನೀಡಿದ ಬಳಿಕ ಪೀಣ್ಯ ಕೈಗಾರಿಕಾ ಪ್ರದೇಶದವರೆಗೆ ಸಿಎಂ ಹಾಗೂ ಕೇಂದ್ರ ಸಚಿವರು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಸಂಪಿಗೆ ರಸ್ತೆಯಿಂದ ಪೀಣ್ಯ ತಲುಪುತ್ತಿದ್ದ ಮೆಟ್ರೋ ಇನ್ನು ಮುಂದೆ ನಾಗಸಂದ್ರದವರೆಗೆ ಸಂಚರಿಸಲಿದೆ. ರೈಲಲ್ಲಿ ಪ್ರಯಾಣಿಸಿದರೆ ಮಲ್ಲೇಶ್ವರಂ ನಿಂದ ನಾಗಸಂದ್ರವನ್ನು ಕೇವಲ 25 ನಿಮಿಷದಲ್ಲಿ ತಲುಪಬಹುದು.
|
ಫೆಬ್ರವರಿಯಲ್ಲೇ ಆರಂಭವಾಗಬೇಕಿತ್ತು
ಪೀಣ್ಯ ಕೈಗಾರಿಕಾ ನಿಲ್ದಾಣದಿಂದ ನಾಗಸಂದ್ರವರೆಗಿನ ನಮ್ಮ ಮೆಟ್ರೋ ಕಾಮಗಾರಿ ಡಿಸೆಂಬರ್ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇತ್ತು, 2015ರ ಫೆಬ್ರವರಿಗೆ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಮೇನಲ್ಲಿ ಸಂಚಾರ ಆರಂಭವಾಗಿದೆ,

10 ನಿಮಿಷಕ್ಕೆ ಒಂದು ರೈಲು
ಮಲ್ಲೇಶ್ವರಂ ಸಂಪಿಗೆ ರಸ್ತೆಯ ನಿಲ್ದಾಣದಿಂದ ಹೊರಡುವ ಎಲ್ಲಾ ಮೆಟ್ರೋ ರೈಲುಗಳು ನಾಗಸಂದ್ರವರೆಗೆ ಸಂಚರಿಸಲಿವೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ರವರೆಗೆ ಪ್ರತಿ ಹತ್ತು ನಿಮಿಷಕ್ಕೊಂದು ರೈಲು ಈ ಮಾರ್ಗದಲ್ಲಿ ಸಂಚಾರ ನಡೆಸಲಿದೆ. ಈ ಮಾರ್ಗದಲ್ಲಿ ಗರಿಷ್ಠ 23 ರೂ., ಕನಿಷ್ಠ 10 ರೂ. ಪ್ರಯಾಣದರವಿದೆ.

ಪ್ರಯಾಣದರವನ್ನು ನಿಗದಿ ಮಾಡಲಾಗಿದೆ.
ನಾಗಸಂದ್ರ- ದಾಸರಹಳ್ಳಿ 10 ರೂ.
ನಾಗಸಂದ್ರ- ಜಾಲಹಳ್ಳಿ 13 ರೂ.
ನಾಗಸಂದ್ರ- ಪೀಣ್ಯ ಇಂಡಸ್ಟ್ರಿ 14 ರೂ.
ಸಂಪಿಗೆ ರಸ್ತೆ- ಪೀಣ್ಯ ಇಂಡಸ್ಟ್ರಿ 23 ರೂ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications