ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗ: ಗಡುವು
ಬೆಂಗಳೂರು, ಜೂನ್ 19- ರಾಜ್ಯದ ರಾಜಧಾನಿ ಬೆಂಗಳೂರಿನ ಹೆಮ್ಮೆಯ ಕೊಡುಗೆಗಳಲ್ಲಿ ನಮ್ಮ ಮೆಟ್ರೋ ರೈಲ್ವೆ ಸಂಚಾರ ವ್ಯವಸ್ಥೆಯೂ ಒಂದು. ಆದರೆ ನಮ್ಮ ಮೆಟ್ರೋದಲ್ಲಿ ನಮ್ಮ ಕನ್ನಡಿಗರಿಗೇ ಉದ್ಯೋಗವಿಲ್ಲ ಎಂಬುದು ಆರಂಭದಿಂದಲೂ ಕೇಳಿಬಂದಿರುವ ಮಾತು. ಗಮನಾರ್ಹವೆಂದರೆ ಇಂದಿಗೂ ಕನ್ನಡಿಗರ ಅನಾದರಣೆ ಮುಂದುವರಿದೇ ಇದೆ.
ಕನ್ನಡಿಗರಿಗೆ ಇಲ್ಲಿ ಮೊದಲ ಪ್ರಾಶಸ್ತ್ಯ ನೀಡಬೇಕು. ನಮ್ಮವರಿಗೂ ಉದ್ಯೋಗ ಕಲ್ಪಿಸಿ ಎಂದು ಅಂದಿನಿಂದಲೂ ನಿರಂತರ ಬೇಡಿಕೆ/ಪ್ರತಿಭಟನೆಗಳು ನಡೆಯುತ್ತಾ ಬಂದಿವೆ. ಆದರೆ ಅದು ಸಂಬಂಧಪಟ್ಟವರ ಕಿವಿಗೆ ಬಿದ್ದಿಲ್ಲ.
ಆದರೆ ಇಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವೇದಿಕೆಯ ಅಧ್ಯಕ್ಷ ಟಿಎ ನಾರಾಯಣಗೌಡ ಅವರ ನೇತೃತ್ವದಲ್ಲಿ ಶಾಂತಿನಗರದ ಬಿಎಂಆರ್ ಸಿಎಲ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. 'ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಕನ್ನಡ ಭಾಷೆಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು' ಎಂಬುದು ವೇದಿಕೆಯ ಪ್ರಮುಖ ಬೇಡಿಕೆಯಾಗಿತ್ತು.

ಪ್ರತಿಭಟನೆಯ ನಂತರ ವೇದಿಕೆಯ ಕಾರ್ಯಕರ್ತರು ಬಿಎಂಆರ್ ಸಿಎಲ್ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಕರೋಲಾ ಅವರಿಗೆ ಮನವಿ ಸಲ್ಲಿಸಿ, ಕನ್ನಡಿಗರಿಗೆ ಹೆಚ್ಚು ಆದ್ಯತೆ ನೀಡುವಂತೆ ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಪ್ರದೀಪ್ ಸಿಂಗ್ ಕರೋಲಾ ಒಂದು ವಾರ ಕಾಲಾವಕಾಶ ಕೋರಿದ್ದು, ಅಷ್ಟರಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಹಾಕುವುದಾಗಿ ಒಪ್ಪಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣ ಗೌಡ ಅವರು 'ಹಿಂದಿ ಭಾಷೆಯನ್ನು ಸಂಪರ್ಕ ಭಾಷೆಯನ್ನಾಗಿ ಮಾಡಬಾರದು. 'ನಮ್ಮ ಮೆಟ್ರೋ' ನಿಲ್ದಾಣಗಳಲ್ಲಿ ಕನ್ನಡದಲ್ಲೇ ನಾಮಫಲಕ ಹಾಕಬೇಕು, ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಹೊರ ರಾಜ್ಯಗಳಿಂದ ಬಂದವರೇ ನಮ್ಮ ಮೆಟ್ರೋದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ನಮ್ಮ ಮೆಟ್ರೋ ಆಡಳಿತ ಮಂಡಳಿ ಕನ್ನಡಿಗರಿಗೆ ತಾರತಮ್ಯ ಮಾಡುತ್ತಿದೆ. ಕನ್ನಡದಲ್ಲಿ ನಾಮಫಲಕ ಹಾಕಿಲ್ಲ. ಕನ್ನಡಿಗರಿಗೆ ಉದ್ಯೋಗ ನೀಡಿಲ್ಲ ಎಂದು ವೇದಿಕೆಯ ಕಾರ್ಯಕರ್ತರು ಕಿಡಿಕಾರಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications