ಬೆಳ್ಳಂದೂರು ಪರಿಸರದ ಕಾರ್ಖಾನೆಗಳ ನೀರು, ವಿದ್ಯುತ್ ಕಡಿತಕ್ಕೆ ಆದೇಶ
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಬೆಳ್ಳಂದೂರು ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ 76 ಕಾರ್ಖಾನೆಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ನಿಲ್ಲಿಸುವಂತೆ ಹಸಿರು ನ್ಯಾಯಾಧೀಕರಣ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ.
ನವದೆಹಲಿ, ಮೇ 25: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಬೆಳ್ಳಂದೂರು ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ 76 ಕಾರ್ಖಾನೆಗಳನ್ನು ಮುಚ್ಚುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಖಡಕ್ ಆದೇಶ ನೀಡಿದೆ.
ಈ ಕಾರ್ಖಾನೆಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ನಿಲ್ಲಿಸುವಂತೆ ಹಸಿರು ನ್ಯಾಯಾಧೀಕರಣ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ.

ಇನ್ನು ಕೆರೆ ಸುತ್ತ ಮುತ್ತಲಿನ ಮನೆಗಳು ಮತ್ತು ಅಪಾರ್ಟ್ ಮೆಂಟ್ ಗಳಲ್ಲಿ ಕೊಳಚೆ ನೀರು ಶುದ್ದೀಕರಣ ವ್ಯವಸ್ಥೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಇಲ್ಲದಿದ್ದಲ್ಲಿ ಅವರಿಗೂ ವಿದ್ಯುತ್ ಮತ್ತು ನೀರಾವರಿ ಸಂಪರ್ಕ ಕಡಿತಗೊಳಿಸುವಂತೆ ಆದೇಶ ನೀಡಿದೆ. ಜತೆಗೆ ಅಧಿಕಾರಿಗಳ ತಂಡ ಈ ನೀರು ಶುದ್ದೀಕರಣ ವ್ಯವಸ್ಥೆಗಳು ಸರಿಯಾಗಿ ಕೆಲಸ ಮಾಡುತ್ತಿವೆ ಎಂಬುದನ್ನು ಪರಿಶೀಲನೆ ಮಾಡಬೇಕು ಎಂದೂ ಹೇಳಿದೆ.
ಇನ್ನು ಅಗತ್ಯಬಿದ್ದರೆ ಈ ಕಂಪೆನಿಗಳನ್ನು ಜಪ್ತಿ ಮಾಡಿ ಎಂದೂ ರಾಜ್ಯ ಮಾಲಿನ್ಯ ನಿಯಂತ್ರಣ ಇಲಾಖೆಗೆ ಕೋರ್ಟ್ ಆದೇಶ ನೀಡಿದೆ. ನ್ಯಾಯಧೀಶ ಸ್ವತಂತ್ರ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಇನ್ನು ಮಧ್ಯಮ ಗಾತ್ರದ ಯಾವುದೇ ಕೈಗಾರಿಕೆಗಳೂ ಮಾಲಿನ್ಯದಲ್ಲಿ ತೊಡಗಿದ್ದರೆ ಅವರಿಗೂ ನೊಟೀಸ್ ನೀಡುವಂತೆ ನ್ಯಾಯಾಧೀಕರಣ ಹೇಳಿದೆ. ಕೆರೆಯ ನೈರ್ಮಲ್ಯಕ್ಕೆ ಸರಕಾರದ ಇಲಾಖೆಗಳು ಮತ್ತು ಕರ್ನಾಟಕ ಸರಕಾರವೇ ಜವಾಬ್ದಾರಿ. ಯಾರಾದರೂ ತಂದು ಕರೆಯಲ್ಲಿ ಕಸ ಸುರಿದರೆ 5 ಲಕ್ಷ ದಂಡ ವಿಧಿಸುವಂತೆ ನ್ಯಾಯಾಧೀಕರಣ ಹೇಳಿದೆ.
ಫೆಬ್ರವರಿ 20ರಂದು ಮಾಧ್ಯಮ ವರದಿಗಳ ಆಧಾರದಲ್ಲಿ ಬೆಳ್ಳಂದೂರು ಕೆರೆಯ ಸಮಸ್ಯೆಯನ್ನು ನ್ಯಾಯಾಧೀಕರಣ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡು ವಿಚಾರಣೆಗೆ ಒಳಪಡಿಸಿತ್ತು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications