ನಿಪಾಹ್ ಚಿಕಿತ್ಸೆ, ಮುನ್ನೆಚ್ಚರಿಕೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್
Recommended Video
ಬೆಂಗಳೂರು, ಮೇ 24: ರಾಜ್ಯದೆಲ್ಲೆಡೆಯಿಂದ ಕೇಳಿಬರುತ್ತಿರುವ ನಿಪಾಹ್ ವೈರಸ್ ಭೀತಿಯ ಕುರಿತು ಎಚ್ಚೆತ್ತುಕೊಂದಿರುವ ಆರೊಗ್ಯ ಇಲಾಖೆ ಈಗಾಗಲೇ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅದರದೇ ಒಂದು ಭಾಗವಾಗಿ ರಾಜಧಾನಿ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಪಾಹ್ ಮುನ್ನೆಚ್ಚರಿಕೆಗಾಗಿ ಮತ್ತು ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ಗಳನ್ನು ನಿರ್ಮಿಸಲು ಸೂಚಿಸಲಾಗಿದೆ.
ಮಾರಣಾಂತಿಕ ನಿಪಾಹ್ ವೈರಸ್ ಹೇಗೆ ಹರಡುತ್ತೆ ? ಮುನ್ನೆಚ್ಚರಿಕೆ ಏನು?
ಈಗಾಗಲೇ ಬೆಂಗಳೂರಿನ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸ್ ಕೇಂದ್ರ, ಕೆಸಿ ಜನರಲ್ ಆಸ್ಪತ್ರೆ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಪ್ರತ್ಯೇಕ ವಾರ್ಡ್ ಗಳನ್ನು ಹೊಂದಿವೆ.
ಒಂದು ಬಗೆಯ ಬಾವಲಿ(ಫ್ರೂಟ್ ಬ್ಯಾಟ್ಸ್)ಗಳಿಂದ ಹರಡುವ ಈ ಸೋಂಕು ರೋಗ ಮನುಷ್ಯ ಮತ್ತು ಪ್ರಾಣಿಗಳಲ್ಲಿ ಕಂಡುಬರುತ್ತಿದ್ದು, ಸದ್ಯಕ್ಕೆ ಈ ರೋಗಕ್ಕೆ ಯಾವುದೇ ರೀತಿಯ ಪರಿಣಾಮಕಾರೀ ಚಿಕಿತ್ಸೆ ಪತ್ತೆಯಾಗಿಲ್ಲ. ಈ ಮಾರಣಾಂತಿಕ ಕಾಯಿಲೆಗೆ ಈಗಾಗಲೇ ಭಾರತದಲ್ಲಿ 10 ಕ್ಕೂ ಹೆಚ್ಚು ಜನ ಬಲಿಯಾಗಿರುವುದು ದುರಂತ.