ಲೋಡ್ ಶೆಡ್ಡಿಂಗ್ ಮಾಡೋಲ್ಲ, ಸಚಿವರ ಭರವಸೆ
ಬೆಂಗಳೂರು, ಏ. 23 : ಬೇಸಿಗೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ನಗರಗಳಲ್ಲಿ ಒಂದೆರಡು ಗಂಟೆ ವಿದ್ಯುತ್ ಕಡಿತವಾಗುತ್ತಿದೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿನ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವುದಿಲ್ಲ. ಅಗತ್ಯ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಯಾಗುತ್ತಿದೆ ಎಂದು ಅವರು ಹೇಳಿದರು. ನಗರ ಪ್ರದೇಶದಲ್ಲಿ 24 ಗಂಟೆ, ಗ್ರಾಮೀಣ ಪ್ರದೇಶದಲ್ಲಿ 18 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬೇಸಿಗೆಯಲ್ಲಿ ಕೃಷಿ ಚಟುವಟಿಕೆ ಕಡಿಮೆಯಾಗಿರುವುದರಿಂದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಬೇಡಿಕೆ ಕೂಡ ಇಳಿಕೆಯಾಗಿದೆ. ಮಾರ್ಚ್ ಕೊನೆಯ ವಾರದಲ್ಲಿ ಮತ್ತು ಏಪ್ರಿಲ್ ತಿಂಗಳಲ್ಲಿ 2-3 ದಿನ ಮಾತ್ರ ವಿದ್ಯುತ್ ಖರೀದಿಸಲಾಗಿದ್ದು, ಉಳಿದಂತೆ ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಯಾಗುತ್ತಿದೆ ಎಂದರು. [ಮೇಕೆದಾಟು ಯೋಜನೆ ಕೈ ಬಿಟ್ಟ ಸರ್ಕಾರ]
ಜಲ ವಿದ್ಯುತ್ ಉತ್ಪಾದಿಸುತ್ತಿರುವ ಜಲಾಶಯಗಳಲ್ಲಿ ಇನ್ನೂ 70 ದಿನಗಳ ವಿದ್ಯುತ್ ಉತ್ಪಾದನೆಗೆ ಸಾಕಾಗುವಷ್ಟು ನೀರಿದೆ. ಜಲವಿದ್ಯುತ್ ಸ್ಥಾವರಗಳಲ್ಲಿ 208 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಬೇಡಿಕೆ 168 ದಶಲಕ್ಷ ಯೂನಿಟ್ ಮಾತ್ರ ಇದೆ. ಆದ್ದರಿಂದ ಲೋಡ್ ಶೆಡ್ಡಿಂಗ್ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. [ಕಾದಿದೆ ವಿದ್ಯುತ್ ದರ ಏರಿಕೆ ಶಾಕ್]
ಮೇಕೇದಾಟು ಯೋಜನೆ ಕೈ ಬಿಟ್ಟಿಲ್ಲ : ವಿದ್ಯುತ್ ಉತ್ಪಾದನೆಗಾಗಿ ಮೇಕೆದಾಟು ಯೋಜನೆ ಜಾರಿಗೊಳಿಸಿ ರಾಜ್ಯದ ಹಿತವನ್ನು ಕಾಪಾಡಲಾಗುತ್ತದೆ. ರಾಜಕೀಯ ಕಾರಣಕ್ಕಾಗಿ ಮೇಕೆದಾಟು ಯೋಜನೆ ಕೈಬಿಡಲಾಗಿದೆ ಎಂಬ ಮಾಜಿ ಸಿಎಂ ಸದಾನಂದಗೌಡರ ಹೇಳಿಕೆ ಅರ್ಥಹೀನವಾದದ್ದು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಮೇಕೆದಾಟು ಯೋಜನೆ ಅಗತ್ಯವಾದರೆ ಅದನ್ನು ಅನುಷ್ಠಾನ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಸರ್ಕಾರದ ಪಾತ್ರವಿಲ್ಲ : ಮೇ 16ರ ನಂತರ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಲು ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದ ತೀರ್ಮಾನಿಸಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದು ವಿದ್ಯುತ್ ಸರಬರಾಜು ಕಂಪನಿಗಳ ಬೇಡಿಕೆಯಾಗಿದೆ. ವಿದ್ಯುತ್ ದರ ಏರಿಕೆ ಮಾಡುವ ವಿಚಾರದಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸಚಿವರು ತಿಳಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications