ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರ, ಕಾರ್ಮಿಕರ ಮಧ್ಯದ ಬಿಕ್ಕಟ್ಟು: ಮಕ್ಕಳಿಗೆ ಉಪವಾಸ

|
Google Oneindia Kannada News

ಬೆಂಗಳೂರು, ಫೆಬ್ರವರಿ 08 : ಗಂಡ ಹೆಂಡತಿ ಜಗಳದಲ್ಲಿ ಕೂಡು ಬಡವಾಯಿತು ಎಂಬಂತೆ ಸರ್ಕಾರ ಹಾಗೂ ಬಿಸಿಯೂಟ ಕಾರ್ಮಿಕರ ನಡುವಿನ ಬಿಕ್ಕಟ್ಟಿನಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳು ಗುರುವಾರದಿಂದ ಮಧ್ಯಾಹ್ನ ಬಿಸಿಯೂಟದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ.

ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಸಂಘ ಕಳೆದ ಎರಡು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಜತೆಗೆ ಗುರುವಾರ ವಿಧಾನಸೌಧ ಚಲೋ ಹಮ್ಮಿಕೊಂಡಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 10 ಸಾವಿರಕ್ಕೂ ಹೆಚ್ಚು ಬಿಸಿಯೂಟ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತಗೊಳ್ಳಲಿದೆ.

ರಸ್ತೆ ತಡೆಗೆ ಮುಂದಾದ ಬಿಸಿಯೂಟ ಕಾರ್ಮಿಕರು: ಪೊಲೀಸರ ಜತೆ ವಾಗ್ವಾದರಸ್ತೆ ತಡೆಗೆ ಮುಂದಾದ ಬಿಸಿಯೂಟ ಕಾರ್ಮಿಕರು: ಪೊಲೀಸರ ಜತೆ ವಾಗ್ವಾದ

ರಾಜ್ಯದ ಬೀದರ್, ಕಲಬುರಗಿ, ಮೈಸೂರು, ಬೆಳಗಾವಿ, ಬಾಗಲಕೋಟೆ, ಗದಗ, ಮೈಸೂರು, ಚಾಮರಾಜನಗರ, ಬಳ್ಳಾರಿ, ತುನಕೂರು, ಕೊಡಗು, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಹೊಳಲ್ಕೆರೆ, ಹಿರಿಯೂರು ತಾಲೂಕುಗಳ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಖಾಸಗಿ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಬಂದ್ ಆಗಲಿದೆ.

No mid day meals in schools from today

ಗುರುವಾರದ ಗಡುವು: ಎಐಟಿಯುಸಿ ಸಂಯೋಜಿತ ಸಂಘದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಮುಂದುವರೆದಿದ್ದು, ಗುರುವಾರ ಸಂಜೆಯ ಒಳಗೆ ಬೇಡಿಕೆ ಈಡೇರಿಸಿದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ ಬೇಡಿಕೆ ಈಡೇರಿಸುವ ಬಗ್ಗೆ ಮಾತುಕತೆ ನಡೆಸಲು ಇದುವರೆಗೂ ಸಚಿವರಾಗಲಿ ಅಥವಾ ಅಧಿಕಾರಿಗಳಾಗಲಿ ಇತ್ತ ಸುಳಿದಿಲ್ಲ. ಹಾಗಾಗಿ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಸಂಘದ ರಾಜ್ಯಾಧ್ಯಕ್ಷೆ ಕೆ.ಎಸ್. ವರಲಕ್ಷ್ಮೀ ತಿಳಿಸಿದ್ದಾರೆ.

English summary
As workers gone indefinite strike seeking minimun Rs.15 thousand basic salary, midday meals supply in all schools in the state hit from today. The workers have said they will not work till the demands to be fulfilled.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X