ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷ ಸಂಭ್ರಮಾಚರಣೆ ಸುಸೂತ್ರವಾಗಿ ನಡೆದಿದೆ: ರಾಮಲಿಂಗಾ ರೆಡ್ಡಿ

|
Google Oneindia Kannada News

ಬೆಂಗಳೂರು, ಜನವರಿ 01 : ಹೊಸ ವರ್ಷ ದಿನದಂದು ಒಂದಿಲ್ಲೊಂದು ಅಹಿತಕರ ಸಾಕ್ಷಿಯಾಗುತ್ತಿದ್ದ ಬೆಂಗಳೂರಿನ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಈ ಬಾರಿ ಪೊಲೀಸ್ ಸರ್ಪಗಾವಲಿನಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ನಿಜಕ್ಕೂ ಇದು ಸಂತೋಷಕರ ಸಂಗತಿ.

ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ತ್ರಿಬಲ್ ಮರ್ಡರ್ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ತ್ರಿಬಲ್ ಮರ್ಡರ್

ಈ ಬಗ್ಗೆ ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ, "ಹೊಸ ವರ್ಷಾಚರಣೆಗೆಂದು ಬೆಂಗಳೂರಿನ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಸುಮಾರು ಒಂದು ಲಕ್ಷ ಜನ ಸೇರಿದ್ದರೂ ಯಾವುದೇ ಅಹಿತಕರ ಘಟನೆಗೆ ಎಡೆಮಾಡಿಕೊಡದೆ ಪೊಲೀಸರು ಚೆನ್ನಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

no untoward incidents took place during new year celebrations says Ramalinga Reddy

ನಗರದಲ್ಲಿ ಪೊಲೀಸ್ ಬಂದೋಬಸ್ತ್ ಚೆನ್ನಾಗಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಹೊಸ ವರ್ಷ ಸಂಭ್ರಮಾಚರಣೆ ಸುಸೂತ್ರವಾಗಿ ನಡೆದಿದೆ. ಇದೂವರೆಗೂ ಎಲ್ಲಿಯೂ ಯಾವ ಕೇಸ್ ಸಹ ದಾಖಲಾಗಿಲ್ಲ ಎಂದು ಹೇಳಿದರು.

ಬೆಂಗಳೂರು ಪೊಲೀಸರ ಮುಂಜಾಗ್ರತೆ: ಶಾಂತವಾಗಿ ಶುರುವಾಯ್ತು ಹೊಸವರ್ಷಬೆಂಗಳೂರು ಪೊಲೀಸರ ಮುಂಜಾಗ್ರತೆ: ಶಾಂತವಾಗಿ ಶುರುವಾಯ್ತು ಹೊಸವರ್ಷ

ಇನ್ನು ಕೆಲವು ಜನ ಹೆಚ್ಚಿಗೆ ಕುಡಿದ್ದರಿಂದ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು. ಕೆಲವು ಸ್ಥಳಗಳಲ್ಲಿ ಕುಡಿದ ಮಹಿಳೆಯರನ್ನು ಪೊಲೀಸರು ಮನೆಯವರೆಗೂ ಹೋಗಿ ಬಿಟ್ಟುಬಂದಿದ್ದಾರೆ ಎಂದು ಪೊಲೀಸರ ಕಾರ್ಯವನ್ನು ಶ್ಲಾಘಿಸಿದರು. ಇದೇ ವೇಳೆ ವಿಕಾಸಸೌಧದ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದರು.

English summary
Home Minister Ramalinga Reddy clarifies on alleged molestation during new year celebrations, No untoward incidents took place during new year celebrations in the bengaluru city said Ramalinga Reddy today at in press conference at Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X