ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದ ಎಂಬಿ ಪಾಟೀಲ್
ಬೆಂಗಳೂರು, ಡಿಸೆಂಬರ್ 22: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕದ 7 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡುತ್ತಿರುವುದರಿಂದ ಉತ್ತರ ಕರ್ನಾಟಕದ ಭಾಗಕ್ಕೆ ಸ್ವಲ್ಪ ಮಟ್ಟಿಗೆ ನ್ಯಾಯ ಸಿಕ್ಕಂತಾಗಿದೆ ಎಂದು ಸಂಭಾವ್ಯ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ?
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾದಾಗಲೇ ನಾನು ಸಚಿವನಾಗಬೇಕಿತ್ತು ನನಗೆ ಆ ಅರ್ಹತೆಯೂ ಇತ್ತು ಆದರೆ ಈಗ ಆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಅದರಲ್ಲಿ ನನಗೆ ಖುಷಿ ಇದೆ ಎಂದರು.
ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ
ಕಾಂಗ್ರೆಸ್ ಹೈಕಮಾಂಡ್ ಈಗ ಈ ನಿರ್ಧಾರ ಮಾಡಿದೆ. ಸಚಿವ ಸ್ಥಾನ ಸಿಗದಿದ್ದಾಗಲೂ ನಾನು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ನನ್ನ ಕರ್ತವ್ಯವನ್ನು ಮರೆತಿರಲಿಲ್ಲ. ನಾನು ಮಾಡಿರುವ ಕೆಲಸವನ್ನು ಜನರು ಮೆಚ್ಚಿದ್ದಾರೆ. ಇದೀಗ 7 ಮಂದಿಗೆ ಸಚಿವ ಸ್ಥಾನ ನೀಡುತ್ತಿದ್ದು, ನಮಗಾದ ತಾರತಮ್ಯ ತಕ್ಕ ಮಟ್ಟಿಗೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿಯವರು ನಮ್ಮೊಂದಿಗೇ ಇರುತ್ತಾರೆ, ಪಕ್ಷ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ, ಯಡಿಯೂರಪ್ಪ ಕನಸು ಕಾಣುತ್ತಿದ್ದಾರೆ ಅದು ಎಂದಿಗೂ ಸಾಧ್ಯವಿಲ್ಲ ಎಂದು ನುಡಿದರು.