ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದ ಎಂಬಿ ಪಾಟೀಲ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 22: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕದ 7 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡುತ್ತಿರುವುದರಿಂದ ಉತ್ತರ ಕರ್ನಾಟಕದ ಭಾಗಕ್ಕೆ ಸ್ವಲ್ಪ ಮಟ್ಟಿಗೆ ನ್ಯಾಯ ಸಿಕ್ಕಂತಾಗಿದೆ ಎಂದು ಸಂಭಾವ್ಯ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ? ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ?

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾದಾಗಲೇ ನಾನು ಸಚಿವನಾಗಬೇಕಿತ್ತು ನನಗೆ ಆ ಅರ್ಹತೆಯೂ ಇತ್ತು ಆದರೆ ಈಗ ಆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಅದರಲ್ಲಿ ನನಗೆ ಖುಷಿ ಇದೆ ಎಂದರು.

ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ

ಕಾಂಗ್ರೆಸ್ ಹೈಕಮಾಂಡ್ ಈಗ ಈ ನಿರ್ಧಾರ ಮಾಡಿದೆ. ಸಚಿವ ಸ್ಥಾನ ಸಿಗದಿದ್ದಾಗಲೂ ನಾನು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ನನ್ನ ಕರ್ತವ್ಯವನ್ನು ಮರೆತಿರಲಿಲ್ಲ. ನಾನು ಮಾಡಿರುವ ಕೆಲಸವನ್ನು ಜನರು ಮೆಚ್ಚಿದ್ದಾರೆ. ಇದೀಗ 7 ಮಂದಿಗೆ ಸಚಿವ ಸ್ಥಾನ ನೀಡುತ್ತಿದ್ದು, ನಮಗಾದ ತಾರತಮ್ಯ ತಕ್ಕ ಮಟ್ಟಿಗೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

North Karnataka is getting justice now: MB Patil

ರಮೇಶ್ ಜಾರಕಿಹೊಳಿಯವರು ನಮ್ಮೊಂದಿಗೇ ಇರುತ್ತಾರೆ, ಪಕ್ಷ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ, ಯಡಿಯೂರಪ್ಪ ಕನಸು ಕಾಣುತ್ತಿದ್ದಾರೆ ಅದು ಎಂದಿಗೂ ಸಾಧ್ಯವಿಲ್ಲ ಎಂದು ನುಡಿದರು.

English summary
MB Patil opines that after getting seven members to new cabinet, north karnataka getting some sort of justice.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X