ಓಲಾ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ?
ಬೆಂಗಳೂರು, ಮಾರ್ಚ್ 11 : ಬೆಂಗಳೂರಿನಲ್ಲಿ ಆರಂಭವಾದ ಓಲಾ ಮತ್ತು ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳ್ಳಲಿದೆ. ಶುಕ್ರವಾರದಿಂದಲೇ ಜಾರಿಗೆ ಬರುವಂತೆ ಓಲಾ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಿದೆ. ಮಾರ್ಚ್ 3ರಂದು ಆರಂಭವಾಗಿದ್ದ ಸೇವೆ 11ರಂದು ಸ್ಥಗಿತವಾಗಿದೆ.
ಓಲಾ ಮತ್ತು ಊಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಬಳಸಬೇಡಿ ಎಂದು ಸಾರಿಗೆ ಇಲಾಖೆ ಜನರಿಗೆ ಮನವಿ ಮಾಡಿತ್ತು. ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಲು ಕಂಪನಿಗಳು ಸಾರಿಗೆ ಇಲಾಖೆಯಿಂದ ಒಪ್ಪಿಗೆ ಪಡೆದಿಲ್ಲ. ಈ ಬೈಕ್ಗಳಲ್ಲಿ ಸಂಚರಿಸುವಾಗ ಅಪಘಾತ ನಡೆದರೆ, ವಿಮೆ ಸೌಲಭ್ಯ ಸಿಗುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿತ್ತು. [ಓಲಾ, ಊಬರ್ ಬೈಕ್ಸ್ ಟ್ಯಾಕ್ಸಿ ಕಾನೂನು ಬಾಹಿರ]

ಸಾರಿಗೆ ಇಲಾಖೆಯ ಆಯುಕ್ತರಾದ ರಾಮೇಗೌಡ ಅವರು ಒನ್ ಇಂಡಿಯಾ ಜೊತೆ ಮಾತನಾಡಿದ್ದು, 'ಯಾವುದೇ ಜಿಲ್ಲೆಯಲ್ಲಿ ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಬೇಕು ಎಂದಾದರೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿನ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅನುಮತಿ ಪಡೆಯಬೇಕು' ಎಂದು ಹೇಳಿದ್ದಾರೆ. [ಬೆಂಗಳೂರು ಸಿಟಿ ಟ್ಯಾಕ್ಸಿ ದೂರವಾಣಿ ಸಂಖ್ಯೆಗಳು]
'ಅನುಮತಿ ಇಲ್ಲದೆ ಸಂಚಾರ ನಡೆಸುತ್ತಿರುವ ಬೈಕ್ ಟ್ಯಾಕ್ಸಿಗಳನ್ನು ನಾವು ವಶಕ್ಕೆ ಪಡೆದಿದ್ದೇವೆ. ನಗರದಲ್ಲಿ ಅನುಮತಿ ಪಡೆಯದೆ ಇಂತಹ ಸೇವೆ ನಡೆಸಲು ಸಾಧ್ಯವಿಲ್ಲ. ಅನುಮತಿ ಇಲ್ಲದೆ ಟ್ಯಾಕ್ಸಿ ಸೇವೆ ಒದಗಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ' ಎಂದು ರಾಮೇಗೌಡ ತಿಳಿಸಿದ್ದಾರೆ. [ಬೆಂಗಳೂರಲ್ಲಿ ಕಾರು ಪೂಲಿಂಗ್ ಸೇವೆ ಆರಂಭಿಸಿದ ಊಬರ್]
ಅಂದಹಾಗೆ ಓಲಾ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. ಊಬರ್ ಸಹ ನಗರದಲ್ಲಿ ಟ್ಯಾಕ್ಸಿ ಸೇವೆಯನ್ನು ಆರಂಭಿಸಿತ್ತು. ಈಗಲೂ ಊಬರ್ ಟ್ಯಾಕ್ಸಿಗಳು ಸಂಚಾರ ನಡೆಸುತ್ತಿದ್ದು, ಕೆಲವು ದಿನಗಳಲ್ಲಿ ಈ ಸೇವೆಯೂ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications