ಬಡ ಜನರಿಗೆ 'ವಸತಿ ಭಾಗ್ಯ' ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 26: ಮುಖ್ಯಮಂತ್ರಿ ಸಿದ್ದರಾಮಯ್ಯ ಬಡ ಜನರಿಗೆ 'ವಸತಿ ಭಾಗ್ಯ' ಘೋಷಿಸಿದ್ದಾರೆ. ವಸತಿ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಸುದ್ದಿಗೋಷ್ಠಿ ನಡೆಸಿದರು. ಅತಿಕ್ರಮಣ ತೆರವು ಪ್ರದೇಶಗಳಲ್ಲಿ 1 ಲಕ್ಷಕ್ಕೂ ಅಧಿಕ ಮನೆ ನಿರ್ಮಿಸಿ ಬಡ ಜನರಿಗೆ ನೀಡುವುದಾಗಿ ಹೇಳಿದರು.
ವಾಸ್ತುಶಾಸ್ತ್ರದ ಪ್ರಕಾರ ಮುಂಬಾಗಿಲು, ಕಿಟಕಿ ಹೇಗಿರಬೇಕು?
ಬೆಂಗಳೂರಿನಲ್ಲಿ 1 ಲಕ್ಷ ಮನೆ ನಿರ್ಮಾಣ ಮಾಡಲಾಗುವುದು, ಐದು ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿರುವ ಬಡವರಿಗೆ ಈ ಯೋಜನೆಯ ಲಾಭ ಸಿಗಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮನೆ ಪಡೆಯಬಹುದಾಗಿದೆ ಎಂದು ಸಿಎಂ ಹೇಳಿದರು.
ಮನೆ ಹೊಂದಲು ಪರಿಶಿಷ್ಟ ಜಾತಿ ಹಾಗೂ ಪಂಗಡದವರು 50 ಸಾವಿರ ನೀಡಬೇಕು. ಹಾಗೆ ಉಳಿದವರು 1 ಲಕ್ಷ ರೂಪಾಯಿ ನೀಡಿ ಮನೆ ಪಡೆಯಬಹುದಾಗಿದೆ. ಸುಮಾರು ಐದೂವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣವಾಗಲಿದೆ, ಮನೆ ಹಂಚಿಕೆ ವಿಷಯದಲ್ಲಿ ಕನ್ನಡಿಗರಿಗೆ ಆದ್ಯತೆ ಇರುತ್ತದೆ ಎಂದರು.
ಬೆಂಗಳೂರಿನಲ್ಲಿ ಜಾರಿಗೊಳ್ಳುತ್ತಿರುವ ಮುಖ್ಯಮಂತ್ರಿಯವರ ಒಂದು ಲಕ್ಷ ವಸತಿ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ @siddaramaiah ಅವರು ಅಧಿಕಾರಿಗಳ ಸಭೆ ನಡೆಸಿದರು. pic.twitter.com/QKyEFQht5r
— CM of Karnataka (@CMofKarnataka) October 26, 2017