ಪದ್ಮಶ್ರೀ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ನಿಧನ
ಬೆಂಗಳೂರು, ಡಿಸೆಂಬರ್ 25: ಗ್ರಾಮೀಣಭಾಗದ ಜನರಿಗೆ ನರ್ಸ್ ಆಗಿದ್ದ ಸೂಲಗಿತ್ತಿ ನರಸಮ್ಮ(98) ಮಂಗಳವಾರ ನಿಧನಹೊಂದಿದ್ದಾರೆ.
ಸುಮಾರು 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಕೀರ್ತಿ ಅವರದ್ದು, ವೈದ್ಯರು ಇಲ್ಲದ ಕಾಲದಲ್ಲಿ ವೈದ್ಯರಂತೆ ಹೆರಿಗೆ ಮಾಡಿಸಿದ್ದರು. 2018ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು.ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆ, ವಯೋಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3 ಗಂಟೆಗೆ ನರಸಮ್ಮ ಅವರು ನಿಧನ ಹೊಂದಿದ್ದಾರೆ.
ಸೂಲಗಿತ್ತಿ ನರಸಮ್ಮ ಮೂಲತಃ ತುಮಕೂರಿನ ಪಾವಗಡದವರು, ಅವರ ಈ ಕೆಲಸವನ್ನು ಪರಿಗಣಿಸಿ ಭಾರತ ಸರ್ಕಾರ 2018ರಲ್ಲಿ ಪದ್ಮಶ್ರೀ ಹಾಗೂ 2013ರಲ್ಲಿ ವಯೋಶ್ರೇಷ್ಟ ಸಮ್ಮಾನ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಇವರು ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಅನ್ನು ಪಡೆದಿದ್ದಾರೆ.
ನರಸಮ್ಮ ಅವರು ಅಲೆಮಾರಿ ಜನಾಂಗಕ್ಕೆ ಸೇರಿದವರು. ಆ ಜನಾಂಗದ ಅದೆಷ್ಟೋ ಮಹಿಳೆಯರು ಕೃಷ್ಣಾಪುರಕ್ಕೆ ಬಂದು ನರಸಮ್ಮ ಅವರಲ್ಲಿ ಆಶ್ರಯ ಪಡೆದು ಹೆರಿಗೆ ಮಾಡಿಸಿಕೊಂಡಿದ್ದಾರೆ.
ಗರ್ಭಿಣಿಯರಿಗೆ ನೈಸರ್ಗಿಕ ಆಯುರ್ವೇದ ಔಷಧಗಳನ್ನು ಕೂಡ ತಯಾರಿಸಿ ಕೊಡುತ್ತಿದ್ದರು. ಗರ್ಭಿಣಿಯರ ಭ್ರೂಣದ ನಾಡಿಮಿಡಿತ ಅರ್ಥ ಮಾಡಿಕೊಂಡು, ಅದರ ಆರೋಗ್ಯ, ಮಗುವಿನ ತಲೆ ಯಾವ ಕಡೆಗಿದೆ, 8-9 ತಿಂಗಳಲ್ಲಿ ಮಗು ಗಂಡೊ-ಹೆಣ್ಣೊ ಎಂದು ಕೂಡ ಹೇಳುವಷ್ಟು ನಿಪುಣರು.
ಸೂಲಗಿತ್ತಿ ನರಸಮ್ಮ ನಿಧನಕ್ಕೆ ಮುಖ್ಯಮಂತ್ರಿ ಶೋಕ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನವರಾದ ನರಸಮ್ಮ ಈ ಭಾಗದ ಸಾವಿರಾರು ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದರು.
ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಗಳು ತಮ್ಮ ಸಂದೇಶ ದಲ್ಲಿ ತಿಳಿಸಿದ್ದಾರೆ.
-
ಗಾಢ ನಿದ್ರೆಗೆ ಜಾರಲು ಇಲ್ಲಿವೆ ಸುಲಭ ಉಪಾಯಗಳು: ಇಂದೇ ಪ್ರಯತ್ನಿಸಿ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ











Click it and Unblock the Notifications