ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ: ಪೊಲೀಸರ ಹದ್ದಿನ ಕಣ್ಣು
ಬೆಂಗಳೂರು, ಆಗಸ್ಟ್ 13: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಗ್ರೌಂಡ್ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆಯಿಂದ 72ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಮೈದಾನದ ಬಿಗಿ ಭದ್ರತೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಸುನೀಲ್ ಕುಮಾರ್ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದರು.
ಸ್ವಾತಂತ್ರ್ಯ ದಿನಾಚರಣೆ ಭಾಷಣ : ಪ್ರಧಾನಿ ಮೋದಿಗೆ ಸಲಹೆ ಕೊಡಿ
ಸ್ವಾಂತಂತ್ರ್ಯ ದಿನಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯಂತೆ ನಿಗಾವಹಿಸಲು ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 9 ಡಿಸಿಪಿ, 16 ಎಸಿಪಿ, 46 ಇನ್ಸ್ಪೆಕ್ಟರ್ ಸೇರಿ 1500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ವಿಶೇಷ ಲೇಖನ : ಸ್ವಾತಂತ್ರ್ಯದ ಕನಸು ನನಸಾಗುತ್ತಿದೆಯಾ?
9 ಕೆಎಸ್ಆರ್ಪಿ, 05 ಕಾರ್ ತುಕರಿ, 3 ಅಗ್ನಿಶಾಮಕ, 2 ಆಂಬ್ಯೂಲೆನ್ಸ್, 2 ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜಿಸಲಾಗಿದೆ. ಮೈದಾನದಲ್ಲಿ 50 ಸಿಸಿಟಿವಿ ಕ್ಯಾಮರಾಗಳು, 4 ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗುತ್ತಿದೆ. ಗಣ್ಯ ವ್ಯಕ್ತಿಗಳಿಗಾಗಿ 1200 ಆಸನಗಳು, ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆಯವರಿಗಾಗಿ 750 ಆಸನಗಳು, ಇತರೆ ಇಲಾಖೆ, ನಿವೃತ್ತ ಸೇನಾಧಿಕಾರಿಗಳಿಗೆ 2500 ಆಸನಗಳು, ಸಾರ್ವಜನಿಕರಿಗಾಗು 7 ಸಾವಿರ ಆಸನಗಳನ್ನು ಮೀಸಲಿರಿಸಲಾಗಿದೆ.
ಶಸ್ತ್ರಾಸ್ತ್ರ, ಹರಿತವಾದ ವಸ್ತು, ಬಾಟಲಿಗಳು, ಕಪ್ಪು ಕರವಸ್ತ್ರ ತರುವಂತಿಲ್ಲ, ಈ ಬಾರಿ ಅಲ್ಪಸಂಖ್ಯಾತರು, ಎಚ್ಐವಿ ಪೀಡಿತರು, ಅನಾಥ ಮಕ್ಕಳು, ಬುದ್ಧಿಮಾಂದ್ಯರು, ಅಂಗವಿಕಲರಿಗೆ ವಿಶೇಷ ಆಹ್ವಾನ ನೀಡಲಾಗಿದೆ.