ಚಿತ್ರಗಳು : ಬೆಂಗಳೂರಲ್ಲಿ ಆಪರೇಷನ್ ಸ್ಮೈಲ್
ಬೆಂಗಳೂರು, ಆಗಸ್ಟ್ 7 : ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಣೆ ಮಾಡಲು ಬೆಂಗಳೂರು ಪೊಲೀಸರು ಆರಂಭಿಸಿರುವ 'ಆಪರೇಷನ್ ಸ್ಮೈಲ್' ಹೆಸರಿನ ಕಾರ್ಯಾಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನವೇ 190 ಮಕ್ಕಳು ಸೇರಿದಂತೆ 280 ಜನರನ್ನು ರಕ್ಷಣೆ ಮಾಡಲಾಗಿದೆ.
'ಆಪರೇಷನ್ ಸ್ಮೈಲ್' ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿರುವ ಕಾರ್ಯಾಚರಣೆಯ ಸಮನ್ವಯಾಧಿಕಾರಿ ಮತ್ತು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಅವರು, ಕೆಲವೇ ದಿನಗಳಲ್ಲಿ ನಗರದಲ್ಲಿ ಮಕ್ಕಳು ಭಿಕ್ಷಾಟನೆ ಮಾಡುವುದು ಅಂತ್ಯವಾಗಲಿದೆ ಎಂದು ಹೇಳಿದ್ದಾರೆ. [ಮಕ್ಕಳ ರಕ್ಷಣೆಗೆ ಆರಂಭವಾಯಿತು 'ಆಪರೇಷನ್ ಸ್ಮೈಲ್']
ಗುರುವಾರ ನಗರದ ಪೊಲೀಸರು 190 ಮಕ್ಕಳು ಸೇರಿದಂತೆ ಒಟ್ಟು 280 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. 70 ತಂಡಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ತನಕ ಕಾರ್ಯಾಚರಣೆ ನಡೆಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಸಮಿತಿ ನೆರವಿನೊಂದಿಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಪ್ರತಿ ರಾಜ್ಯದಲ್ಲಿಯೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉತ್ತರಾಖಂಡ್ ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ 'ಆಪರೇಷನ್ ಸ್ಮೈಲ್' ಕಾರ್ಯಾಚರಣೆ ಮೂಲಕ 264 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಚಿತ್ರಗಳಲ್ಲಿ ನೋಡಿ ಆಪರೇಷನ್ ಸ್ಮೈಲ್.....

ಏನಿದು ಆಪರೇಷನ್ ಸ್ಮೈಲ್?
ಟ್ರಾಫಿಲ್ ಸಿಗ್ನಲ್, ಸಿನಿಮಾ ಮಂದಿರ, ಬಸ್ ಮತ್ತು ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಿಕ್ಷೆ ಬೇಡುವ ಮಕ್ಕಳನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವ ಕಾರ್ಯಾಚರಣೆಯೇ 'ಆಪರೇಷನ್ ಸ್ಮೈಲ್'. ಬೆಂಗಳೂರು ನಗರದಲ್ಲಿ ಗುರುವಾರ ಇದಕ್ಕೆ ಚಾಲನೆ ಸಿಕ್ಕಿದೆ.

ಮೊದಲ ದಿನವೇ 280 ಜನರ ರಕ್ಷಣೆ
40 ಹಸುಗೂಸುಗಳು ಸೇರಿ 190 ಮಕ್ಕಳು, 65 ಮಹಿಳೆಯರು, 25 ಪುರುಷರನ್ನು ಮೊದಲ ದಿನದ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ. ಮಕ್ಕಳನ್ನು ಮಡಿವಾಳದಲ್ಲಿರುವ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.

70 ತಂಡಗಳಿಂದ ಕಾರ್ಯಾಚರಣೆ
ಬೆಂಗಳೂರು ನಗರದಲ್ಲಿ 70 ತಂಡಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ತನಕ ಕಾರ್ಯಾಚರಣೆ ನಡೆಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಸಮಿತಿ ನೆರವಿನೊಂದಿಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಎಲ್ಲೆಲ್ಲಿ ಕಾರ್ಯಾಚರಣೆ?
ಮೆಜೆಸ್ಟಿಕ್, ಯಶವಂತಪುರ, ರೈಲ್ವೆ ಮತ್ತು ಮೆಟ್ರೋ ನಿಲ್ದಾಣಗಳು, ಲಾಲ್ ಬಾಗ್, ಕಬ್ಬನ್ ಪಾರ್ಕ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಎಲ್ಲಾ ರಾಜ್ಯಗಳಲ್ಲೂ ಕಾರ್ಯಾಚರಣೆ
ಸುಪ್ರೀಂಕೋರ್ಟ್ ಆದೇಶದಂತೆ ಪ್ರತಿ ರಾಜ್ಯದಲ್ಲಿಯೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉತ್ತರಾಖಂಡ್ ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ 'ಆಪರೇಷನ್ ಸ್ಮೈಲ್' ಕಾರ್ಯಾಚರಣೆ ಮೂಲಕ 264 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications