ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್

By Mahesh
|
Google Oneindia Kannada News

ಬೆಂಗಳೂರು, ಮೇ 18: ಅಧಿಕಾರ ಗದ್ದುಗೆ ಏರುವ ಸರ್ಕಸ್ ಕರ್ನಾಟಕದಲ್ಲಿ ಮುಂದುವರೆದಿದೆ. ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಹುಮತ ಸಾಬೀತುಪಡಿಸುವ ನಿಟ್ಟಿನಲ್ಲಿ ಕಸರತ್ತು ನಡೆದಿದೆ.

ಈ ನಡುವೆ ಕಾಂಗ್ರೆಸ್ ಹಾಗೂ ಜೆಡಿಎಸ್ ತನ್ನ ಶಾಸಕರನ್ನು ಹಿಡಿದಿಟ್ಟುಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಮೋಸ ಬಯಲು ಮಾಡಿದ ಸುಪ್ರೀಂ : ರಾಹುಲ್ ಗಾಂಧಿಬಿಜೆಪಿ ಮೋಸ ಬಯಲು ಮಾಡಿದ ಸುಪ್ರೀಂ : ರಾಹುಲ್ ಗಾಂಧಿ

ಎಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಹಾರೈಕೆ ಮಾಡಿದ ರಾಹುಲ್ ಗಾಂಧಿ ಅವರು, ಕರ್ನಾಟಕದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಇಬ್ಬರು ಚರ್ಚೆ ನಡೆಸಿದ್ದಾರೆ.

Power struggle in Karnataka: Rahul talks to Deve Gowda over phone

ಸುಪ್ರೀಂಕೋರ್ಟ್ ನಲ್ಲಿ ಬಂದಿರುವ ಆದೇಶ, ಕಾಂಗ್ರೆಸ್ -ಜೆಡಿಎಸ್ ಶಾಸಕರ ಭದ್ರತೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕೇಂದ್ರದ ಬಿಜೆಪಿ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಖರೀದಿಸಲು ಮುಂದಾಗಿದೆ. ಶಾಸಕರ ಭದ್ರತೆ ಮುಖ್ಯವಾಗಿದೆ. ಈ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಹುಲ್ ತಿಳಿದುಕೊಂಡಿದ್ದು, ಈ ಬಗ್ಗೆ ಗುಲಾಂ ನಬಿ ಆಜಾದ್, ಸಿದ್ದರಾಮಯ್ಯ ಅವರಿಗೆ ಸೂಚನೆಗಳನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ.

ಶಾಸಕರನ್ನು ಕಾಯುತ್ತಿರುವ ಡಿಕೆ ಶಿವಕುಮಾರ್ ಬ್ರದರ್ಸ್ ನಾಳೆ ದಿನ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದು ಈಗಾಗಲೇ ನಿರ್ಧಾರವಾಗಿದೆ.

English summary
Amid a power struggle in Karnataka, Congress President Rahul Gandhi on Thursday spoke with Janata Dal (Secular) supremo H D Deve Gowda over phone and is understood to have discussed the prevailing political situation in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X