ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್
ಬೆಂಗಳೂರು, ಮೇ 18: ಅಧಿಕಾರ ಗದ್ದುಗೆ ಏರುವ ಸರ್ಕಸ್ ಕರ್ನಾಟಕದಲ್ಲಿ ಮುಂದುವರೆದಿದೆ. ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಹುಮತ ಸಾಬೀತುಪಡಿಸುವ ನಿಟ್ಟಿನಲ್ಲಿ ಕಸರತ್ತು ನಡೆದಿದೆ.
ಈ ನಡುವೆ ಕಾಂಗ್ರೆಸ್ ಹಾಗೂ ಜೆಡಿಎಸ್ ತನ್ನ ಶಾಸಕರನ್ನು ಹಿಡಿದಿಟ್ಟುಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದ್ದಾರೆ.
ಬಿಜೆಪಿ ಮೋಸ ಬಯಲು ಮಾಡಿದ ಸುಪ್ರೀಂ : ರಾಹುಲ್ ಗಾಂಧಿ
ಎಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಹಾರೈಕೆ ಮಾಡಿದ ರಾಹುಲ್ ಗಾಂಧಿ ಅವರು, ಕರ್ನಾಟಕದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಇಬ್ಬರು ಚರ್ಚೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ನಲ್ಲಿ ಬಂದಿರುವ ಆದೇಶ, ಕಾಂಗ್ರೆಸ್ -ಜೆಡಿಎಸ್ ಶಾಸಕರ ಭದ್ರತೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಕೇಂದ್ರದ ಬಿಜೆಪಿ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಖರೀದಿಸಲು ಮುಂದಾಗಿದೆ. ಶಾಸಕರ ಭದ್ರತೆ ಮುಖ್ಯವಾಗಿದೆ. ಈ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಹುಲ್ ತಿಳಿದುಕೊಂಡಿದ್ದು, ಈ ಬಗ್ಗೆ ಗುಲಾಂ ನಬಿ ಆಜಾದ್, ಸಿದ್ದರಾಮಯ್ಯ ಅವರಿಗೆ ಸೂಚನೆಗಳನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ಶಾಸಕರನ್ನು ಕಾಯುತ್ತಿರುವ ಡಿಕೆ ಶಿವಕುಮಾರ್ ಬ್ರದರ್ಸ್ ನಾಳೆ ದಿನ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದು ಈಗಾಗಲೇ ನಿರ್ಧಾರವಾಗಿದೆ.