ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

|
Google Oneindia Kannada News

Recommended Video

ಇಂದು ಬೆಂಗಳೂರಿಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ | Oneindia Kannada

ಬೆಂಗಳೂರು, ಅಕ್ಟೋಬರ್ 24 : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

ಸ್ವಾತಂತ್ರ್ಯೋತ್ಸವ ಭಾಷಣ: ಕಿತ್ತೂರು ಚೆನ್ನಮ್ಮನ ನೆನೆದ ರಾಷ್ಟ್ರಪತಿಸ್ವಾತಂತ್ರ್ಯೋತ್ಸವ ಭಾಷಣ: ಕಿತ್ತೂರು ಚೆನ್ನಮ್ಮನ ನೆನೆದ ರಾಷ್ಟ್ರಪತಿ

ಮಂಗಳವಾರ ಮಧ್ಯಾಹ್ನ 3.45ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ.

President Ramnath Kovind to visit Bengaluru

ರಾಜಭವನದಲ್ಲಿ ರಾತ್ರಿ 8 ಗಂಟೆಗೆ ಔತಣಕೂಟ ಏರ್ಪಡಿಸಲಾಗಿದ್ದು ಅದರಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿಗಳ ಭೇಟಿ ಹಿನ್ನಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕೆಂಗಲ್ ಹನುಮಂತಯ್ಯ ಅವರ ಕೂಸು, ವಿಧಾನಸೌಧಕ್ಕೀಗ ಅರುವತ್ತು !ಕೆಂಗಲ್ ಹನುಮಂತಯ್ಯ ಅವರ ಕೂಸು, ವಿಧಾನಸೌಧಕ್ಕೀಗ ಅರುವತ್ತು !

ಬುಧವಾರ ವಿಧಾನಸೌಧದ ವಜ್ರಮಹೋತ್ಸವದ ಅಂಗವಾಗಿ ವಿಶೇಷ ಜಂಟಿ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿಗಳು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವಕ್ಕೆ ಶಾಸಕರೇ ದೇಣಿಗೆ ನೀಡಲಿ!ವಿಧಾನಸೌಧದ ವಜ್ರ ಮಹೋತ್ಸವಕ್ಕೆ ಶಾಸಕರೇ ದೇಣಿಗೆ ನೀಡಲಿ!

ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಮಂಡಲ ಜಂಟಿ ಅಧಿವೇಶ ಆರಂಭವಾಗಲಿದ್ದು, ರಾಷ್ಟ್ರಪತಿಗಳು ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ವಿಧಾನ ಪರಿಷತ್‌ ಸಭಾಂಗಣ ವೀಕ್ಷಿಸಲಿದ್ದಾರೆ. ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಮುಂದೆ ಉಭಯ ಸದನಗಳ ಶಾಸಕರು, ರಾಷ್ಟ್ರಪತಿ ಜೊತೆ ಗ್ರೂಪ್‌ ಫೋಟೊ ತೆಗೆಸಿಕೊಳ್ಳಲಿದ್ದಾರೆ.

English summary
President Ramnath Kovind is on a two-day official visit to Karnataka from October 24 to 25, 2017. Special security arrangements have been made even before his arrival in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X