ಕಸ ವಿಂಗಡನೆ ಮಾಡುವಂತೆ ಪ್ರಚಾರ ಮಾಡ್ತಾರೆ ಪುನೀತ್
ಬೆಂಗಳೂರು, ಫೆಬ್ರವರಿ 06 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸ ವಿಂಗಡನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಆಂದೋಲನ ಕೈಗೊಳ್ಳಲಿದೆ. ನಟ ಪುನೀತ್ ರಾಜ್ಕುಮಾರ್ ಅವರು ಈ ಆಂದೋಲನದ ರಾಯಭಾರಿಯಾಗಿದ್ದಾರೆ.
ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮೂಲದಲ್ಲಿಯೇ ಕಸವನ್ನು ವಿಂಗಡೆನೆ ಮಾಡುವ ಕುರಿತು ಜನರಲ್ಲಿ ಅರಿವು ಮೂಡಿಸಲು ಪಾಲಿಕೆ ಪ್ರಚಾರ ಆಂದೋಲನ ನಡೆಸಲಿದೆ. ಪುನೀತ್ ರಾಜ್ಕುಮಾರ್ ಅವರು ಇದರ ರಾಯಭಾರಿಯಾಗಿದ್ದು, ಹಲವು ನಟ-ನಟಿಯರು ಈ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಮಂಜುನಾಥ ರೆಡ್ಡಿ ಹೇಳಿದರು. [ಬೆಂಗಳೂರು : ತ್ಯಾಜ್ಯ ವಿಂಗಡನೆ ಕಡ್ಡಾಯ, ತಪ್ಪಿದರೆ ದಂಡ]

ಪಾಲಿಕೆಯ ಆರೋಗ್ಯ ವಿಭಾಗದ ಡಾ.ಯತೀಶ್ ಕುಮಾರ್ ಅವರು ಈ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಪುನೀತ್ ರಾಜ್ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದು, ಕಸ ವಿಂಗಡೆನೆ ಕುರಿತ ಜಾಹೀರಾತು ಮತ್ತು ಅಭಿಯಾನದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. [ಬೆಂಗಳೂರಿಗರೇ ದಾರಿಯಲ್ಲಿ ಕಸ ಕಂಡ್ರೆ ಸೆಲ್ಫಿ ತಗೊಳ್ಳಿ!]
ಪುನೀತ್ ರಾಜ್ಕುಮಾರ್ ಅವರು ಈ ಆಂದೋಲನದ ರಾಯಭಾರಿಯಾಗಿದ್ದು, ಹಿರಿಯ ನಟಿ ಮತ್ತು ವಿಧಾನಪರಿಷತ್ ಸದಸ್ಯೆ ಜಯಮಾಲಾ, ತಾರಾ ಮುಂತಾದ ಸಿನಿಮಾ ಮತ್ತು ಕಿರುತೆರೆ ನಟ-ನಟಿಯರು ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ. [ಕಸ, ಗುಂಡಿ, ಟ್ರಾಫಿಕ್ ಮುಕ್ತ ಮುಕ್ತ ಮುಕ್ತ ನಗರಕ್ಕೆ ರೆಡ್ಡಿ ಸೂತ್ರ]
ಕರ್ನಾಟಕ ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ 2016ರ ಜನವರಿ 1ರಿಂದಲೇ ಕಸ ವಿಂಗಡಣೆಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ. ಮೂಲದಲ್ಲಿಯೇ ಹಸಿ ಮತ್ತು ಒಣ ಕಸವನ್ನು ವಿಂಗಡಣೆ ಮಾಡಿ ಪೌರ ಕಾರ್ಮಿಕರಿಗೆ ನೀಡಬೇಕು ಎಂದು ಹೇಳಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications