ಬೆಂಗಳೂರಿನಿಂದ ರಾಹುಲ್ ಟ್ವಿಟ್ಟರ್ ಖಾತೆಗೆ ಕನ್ನ
ದೆಹಲಿ ಸೈಬರ್ ಕ್ರೈಂ ಪೊಲೀಸರು ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಬೆಂಗಳೂರಿನಿಂದ ಎಂದು ಸ್ಪಷ್ಟ ಪಡಿಸಿದ್ದು ಅದನ್ನು ಯಾರು ಮಾಡಿದ್ದಾರೆ ಎಂಬ ಮಾಹಿತಿ ಇನ್ನೂ ತಿಳಿಯಬೇಕಾಗಿದೆ
ಬೆಂಗಳೂರು.ಡಿಸೆಂಬರ್ 2: ರಾಹುಲ್ ಟ್ವಿಟ್ಟರ್ ಖಾತೆಗೆ ಕನ್ನ ಹಾಕಿದವರು ಎಲ್ಲಿಯವರು ಎಂಬ ಪ್ರಶ್ನೆಗೆ ಸೈಬರ್ ಕ್ರೈಂ ಪೊಲೀಸರು ಉತ್ತರ ಹುಡುಕಿದ್ದು, ಕನ್ನ ಹಾಕಿರುವುದು ಬೆಂಗಳೂರಿನಲ್ಲಿ ಎಂಬ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ ಒಂದರಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಟ್ವಿಟ್ಟರ್ ಖಾತೆಗೆ ಕನ್ನ ಹಾಕಲಾಗಿತ್ತು ಆದರೆ ಈ ಖಾತೆಯನ್ನು ಯಾರು ಓಪನ್ ಮಾಡಿದ್ದರು ಎಂಬುದು ತಿಳಿದು ಬಂದಿರಲಿಲ್ಲ.[ರಾಹುಲ್ ಟ್ವಿಟ್ಟರ್ ಖಾತೆಗೆ ಕನ್ನ: ಟ್ವಿಟ್ಟರ್ ನಲ್ಲಿ ಲೇವಡಿಯ ಪರಮಾವಧಿ!]

ಡಿಸೆಂಬರ್ 1ನೇ ತಾರೀಖು ಟ್ವಿಟ್ಟರ್ ಖಾತೆ ಕನ್ನ ಹಾಕಿರುವುದು ನಾರ್ವೆ, ಸ್ವಿಡನ್ ದೇಶಕ್ಕೆ ಸೇರಿದ ವ್ಯಕ್ತಿಗಳು ಎಂಬಂತೆ ರಾಹುಲ್ ಖಾತೆಗೆ ಕನ್ನ ಹಾಕಿದ್ದರು. ಅದಕ್ಕೆ ಮುಖ್ಯ ಕಾರಣ ಐಪಿ ಅಡ್ರಸ್ ಗಳು ನಾರ್ವೆ, ಸ್ವಿಡನ್ ದೇಶಕ್ಕೆ ಸೇರಿದಂತೆ ಸೂಚಿಸುತ್ತಿದ್ದವು.
ಇದರ ಬಗ್ಗೆ ತನಿಖೆಗೆ ಮುಂದಾಗಿರುವ ದೆಹಲಿ ಸೈಬರ್ ಕ್ರೈಂ ಪೊಲೀಸರು ಟ್ವಿಟ್ಟರ್ ಖಾತೆಯನ್ನು ಈಟಿ ಫಿಶಿಂಗ್ ಮಾದರಿಯಲ್ಲಿ ಹ್ಯಾಕ್ ಮಾಡಿದ್ದಾರೆ. ಹ್ಯಾಕ್ ಮಾಡಲು ಫಿಶಿಂಗ್ ತಂತ್ರಾಂಶವನ್ನು ಬಳಸಿದ್ದಾರೆ ಎಂದು ಸ್ಪಷ್ಟ ಪಡಿಸಿರುವ ಅವರು
ಕನ್ನ ಹಾಕಲಾಗಿರುವುದು ಕರ್ನಾಟಕದ ಬೆಂಗಳೂರಿನಿಂದ ಎಂದು ಹೇಳಿದ್ದಾರೆ. ಆದರೆ ಅವರು ಯಾರು ಎಲ್ಲಿಂದ ಮಾಡಿದರು ಎಂಬುದರ ಬಗ್ಗೆ ಮಾಹಿತಿ ತಿಳಿಯಬೇಕಿದೆ.
ಟ್ವಿಟ್ಟರ್ ಖಾತೆಗೆ ಕನ್ನ ಹಾಕಿದ್ದರ ವಿಚಾರವಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಾಂಗ್ರೆಸ್ ಮೂಲಕ ದೂರು ದಾಖಲಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications