ರಕ್ತಚಂದನ ಮಾರ್ಗ : ಆಂಧ್ರದಿಂದ ಚೀನಾ ವಯಾ ಬೆಂಗಳೂರು
ಬೆಂಗಳೂರು, ಜೂ.15: ಆಂಧ್ರಪ್ರದೇಶದಿಂದ ಚೀನಾಕ್ಕೆ ರಕ್ತಚಂದನ ಕಳ್ಳಸಾಗಣಿಕೆ ನಡೆಸಲು ಕರ್ನಾಟಕದ ರಾಜಧಾನಿ ಬೆಂಗಳೂರು ಮಾರ್ಗ ಒದಗಿಸಿದೆ ಎಂಬ ಸತ್ಯ ಇತ್ತೀಚೆಗೆ ಬೆಳಕಿಗೆ ಬಂದಿದೆ. ರಕ್ತಚಂದನ ಸ್ಮಗಲಿಂಗ್ ಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಇಬ್ಬರು ಚೀನಿಯರನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಈ ವಿಷಯ ತಿಳಿದು ಬಂದಿದೆ.
ಕಳೆದ ನಾಲ್ಕು ತಿಂಗಳಿನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಬಂಧನ ಇದಾಗಿದೆ. ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಗಂಧದ ಮರದ ತುಂಡುಗಳು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಸಮೀಪದ ಸಾಮಿಲ್ ಗಳಿಗೆ ಇದನ್ನು ಸಾಗಿಸಲಾಗುತ್ತಿತ್ತು ಹಾಗೂ ಅಲ್ಲಿಂದ ಸ್ಮಗ್ಲರ್ ಗಳು ರಾತ್ರೋರಾತ್ರಿ ಹೊತ್ತು ಚೀನಾಗೆ ರವಾನಿಸುತ್ತಿದ್ದರು ಎಂದು ವಿಚಾರಣೆ ಸಂದರ್ಭದಲ್ಲಿ ತಿಳಿದು ಬಂದಿದೆ. [ಆಂಧ್ರ -ತಮಿಳುನಾಡು ಸಂಬಂಧಕ್ಕೆ ಬೆಂಕಿ ಹಚ್ಚಿದ ರಕ್ತ ಚಂದನ]
ಪೀಠೋಪಕರಣ ಮಾಡಿ ಸ್ಮಗಲಿಂಗ್
ವಿಚಾರಣೆ ಸಂದರ್ಭದಲ್ಲಿ ಗಂಧದ ಮರ ಹಾಗೂ ರಕ್ತಚಂದನದ ತುಂಡುಗಳನ್ನು ಪೀಠೋಪಕರಣಗಳಲ್ಲಿ ಸೇರಿಸಿ ಕಳ್ಳ ಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ಆಂಧ್ರದ ರಕ್ತಚಂದನ ಬೆಂಗಳೂರಿಗೆ ತಂದು ಅಲ್ಲಿಂದ ಸಾಮಿಲ್ ಗಳಲ್ಲಿ ಇತರೆ ಮರದ ದಿಮ್ಮಿ, ತುಂಡುಗಳ ಜೊತೆ ರಾಶಿ ಹಾಕಲಾಗುತ್ತಿತ್ತು.

ನಂತರ ಪೀಠೋಪಕರಣ ತಯಾರಿಯಲ್ಲಿ ಬಳಕೆ ಮಾಡಿ, ಟೇಬಲ್, ಕುರ್ಚಿ, ವಿನ್ಯಾಸಯುಕ್ತ ಬೀಡ್ ಗಳಾಗಿ ಪರಿವರ್ತಿಸಿ ಕೊಂಡೊಯ್ಯಲಾಗುತ್ತಿತ್ತು. ರಕ್ತಚಂದನಕ್ಕೆ ಬೇರೆ ರೂಪ, ವಿನ್ಯಾಸ ನೀಡಿ ದೇಶದಿಂದ ಹೊರಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. [ರಕ್ತಚಂದನ ಪ್ರಕರಣ: ನಾಪತ್ತೆಯಾಗಿದ್ದ ನಟಿ ನೀತು ಬಂಧನ]
ಚೀನಿ ವಿದ್ಯಾರ್ಥಿಗಳ ಬಳಕೆ
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಚೀನಾ ಮೂಲದ ವಿದ್ಯಾರ್ಥಿಗಳನ್ನು ರಕ್ತಚಂದನ ಸ್ಮಗಲಿಂಗ್ ಗೆ ಬಳಸಿಕೊಳ್ಳಲಾಗುತ್ತಿದೆ. ಚೀನಿಯರ ಪಾಲಿಗೆ ರಕ್ತಚಂದನ ವ್ಯಾಪಾರದ ವಸ್ತುವಷ್ಟೇ ಅಲ್ಲ ಪವಿತ್ರವಾದ ಮರ ಎನಿಸಿದೆ. ಭಾರತದಿಂದ ಚೀನಾಕ್ಕೆ ರಕ್ತಚಂದನ ರವಾನೆ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ದೇಶದ ಇತರೆ ಭಾಗಗಳಿಗೆ ಸ್ಮಗಲಿಂಗ್ ಮಾಡಲಾಗುತ್ತಿತ್ತು.
ಆಂಧ್ರಪ್ರದೇಶದಿಂದ ಬೆಂಗಳೂರಿಗೆ ನಂತರ ಚೀನಾಕ್ಕೆ ಸಾಗಿಸುವ ತನಕ ಅನೇಕ ಕೈ ಬದಲಾಗುತ್ತದೆ. ಅನೇಕ ಅಧಿಕಾರಿಗಳು, ಸ್ಥಳೀಯ ಮಾಫಿಯಾ ಕೂಡಾ ಇದರಲ್ಲಿ ತುಂಡು ಗುತ್ತಿಗೆ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವಿಚಾರಣೆಯಿಂದ ತಿಳಿದು ಬಂದಿದೆ.
ಈ ನಡುವೆ ತಮಿಳುನಾಡು ಮೂಲದ ಕೂಲಿ ಕಾರ್ಮಿಕ ಹತ್ಯೆ ಆರೋಪದ ಮೇಲೆ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರ ಮೇಲೆ ಕೊಲೆ ಆರೋಪ ಹೊರೆಸಿ ಪ್ರಕರಣ ದಾಖಲಿಸಿ, ಎಫ್ ಐಆರ್ ಹಾಕಿ ತನಿಖೆ ಕೈಗೊಳ್ಳಲಾಗಿದೆ ಎಂದು ಚಿತ್ತೂರು ಪೊಲೀಸರು ಆಂಧ್ರಪ್ರದೇಶ ಹೈಕೋರ್ಟಿಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. (ಇಂಗ್ಲೀಷ್ ಮೂಲ: ವಿಕಾಸ್ ನಂಜಪ್ಪ)
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications