ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಇಪಿಯ ನೌಹೀರಾ ಶೇಖ್‌ರಿಂದ ಕೋಟ್ಯಂತರ ಹಣ ಪಡೆದಿದ್ದ ಜನಾರ್ದನ ರೆಡ್ಡಿ

|
Google Oneindia Kannada News

ಬೆಂಗಳೂರು, ನವೆಂಬರ್ 7: ಈಗಾಗಲೇ ಬ್ಯಾಂಕ್ ಗಿಂತಲೂ ಹೆಚ್ಚು ಬಡ್ಡಿಯನ್ನು ನೀಡುವುದಾಗಿ ಹೇಳಿ ನೂರಾರು ಮಂದಿಯನ್ನು ವಂಚಿಸಿ ಜೈಲು ಪಾಲಾಗಿರುವ ಎಂಇಪಿ ಮುಖ್ಯಸ್ಥೆ ನೌಹೀರಾ ಶೇಖ್ ಅವರನ್ನು ಪಾರು ಮಾಡಲು ಜನಾರ್ದನ ರೆಡ್ಡಿ ಪ್ರಯತ್ನಿಸಿದ್ದರು ಎನ್ನುವ ಮತ್ತೊಂದು ಆರೋಪ ಕೇಳಿಬಂದಿದೆ.

ಮಹಿಳಾ ಎಂಪವರ್ ಮೆಂಟ್ ಪಾರ್ಟಿ ಹೆಸರಿನಲ್ಲಿ ಗುರುತಿಸಿಕೊಂಡ ನೌಹೀರಾ ಶೇಖ್ ಸಾವಿರಾರು ಜನರಿಗೆ ಬೇರೆ ಬೇರೆ ಚಿಟ್ ಫಂಡ್ ಗಳ ಹೆಸರಿನಲ್ಲಿ ಮೋಸ ಮಾಡಿದ್ದು ಬಯಲಾಗಿ ಅವರನ್ನು ಬಂಧಿಸಲಾಗಿತ್ತು ಆದರೆ ಜೈಲಿನಲ್ಲಿದ್ದುಕೊಂಡೇ ಆಕೆಯನ್ನು ಬಿಡಿಸಲು ರೆಡ್ಡಿ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಬಹುಕೋಟಿ ಮೋಸ ಪ್ರಕರಣ: ಸಿಸಿಬಿಯಿಂದ ಜನಾರ್ದನ ರೆಡ್ಡಿ ಹುಡುಕಾಟಬಹುಕೋಟಿ ಮೋಸ ಪ್ರಕರಣ: ಸಿಸಿಬಿಯಿಂದ ಜನಾರ್ದನ ರೆಡ್ಡಿ ಹುಡುಕಾಟ

ನೌಹೀರಾ ಶೇಖ್ ದೇಶದ ಪ್ರಮುಖ ನಗರಗಳಲ್ಲಿ ಬಂಡಾವಾಳ ಹೂಡಿಕೆ ಮಾಡುವ ಹೆಸರಿನಲ್ಲಿ ಜನರಿಂದ ಕೋಟಿ ಕೋಟಿ ರೂ. ಹಣ ಪಡೆದ ಆರೋಪ ಎದುರಿಸುತ್ತಾರೆ. ಈಗಾಗಲೇ ಮುಂಬೈ ಪೊಲೀಸರು ವಾರೆಂಟ್ ಪಡೆದು ನೌಹಿರಾ ಶೇಖ್ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನ್ನನ್ನು ಪಾರು ಮಾಡುವಂತೆ ನೌಹಿರಾ ಶೇಖ್ ಗಾಲಿ ಜನಾರ್ದನ ರೆಡ್ಡಿ ಅವರ ಸಹಾಯವನ್ನು ಅಪೇಕ್ಷಿಸಿದ್ದರು.. ನೌಹೀರಾ ಶೇಖ್ ಅವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದ ರೆಡ್ಡಿ ಕೋಟಿ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ.

ದೀಪಾವಳಿ ವಿಶೇಷ ಪುರವಣಿ

ರೆಡ್ಡಿ ಅವರ ಆಪ್ತರ ಬ್ಯಾಂಕ್ ಖಾತೆಗೆ ಈ ಹಣ ಸಂದಾಯವಾಗಿದೆ ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ. ಸದ್ಯ ರೆಡ್ಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವ ಆಂಬಿಡೆಂಟ್ ಕಂಪನಿ ಮಾಲೀಕ ಫರೀದ್ ಮೂಲಕ ಸಹಾಯ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದರು ಎನ್ನುವ ಮಹಿತಿ ಇದೀಗ ಲಭ್ಯವಾಗಿದೆ.

ಬಂಧನ ಭೀತಿ: ಹೈದರಾಬಾದ್‌ನಲ್ಲಿ ಜಾಮೀನಿಗೆ ಮೊರೆ ಹೋದ ರೆಡ್ಡಿಬಂಧನ ಭೀತಿ: ಹೈದರಾಬಾದ್‌ನಲ್ಲಿ ಜಾಮೀನಿಗೆ ಮೊರೆ ಹೋದ ರೆಡ್ಡಿ

ನೌಹಿರಾ ಶೇಖ್ ಬೆಂಗಳೂರು, ಹೈದ್ರಾಬಾದ್, ಮುಂಬೈ, ಪುಣೆ, ದೆಹಲಿಯಲ್ಲಿ ಬಂಡವಾಳ ಹೂಡಿಕೆ ಮಾಡುವ ಹೆಸರಿನಲ್ಲಿ ಹಲವರಿಂದ ಹಣ ಪಡೆದು ಸಾವಿರ ಕೋಟಿಗೂ ಹೆಚ್ಚು ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಜನಾರ್ದನ ರೆಡ್ಡಿ ಪಾಪಕ್ಕೆ ಮಕ್ಕಳಿಗೆ ಶಿಕ್ಷೆ ಆಗದಿರಲಿ: ಸಿದ್ದರಾಮಯ್ಯ ಟ್ವೀಟ್ ಜನಾರ್ದನ ರೆಡ್ಡಿ ಪಾಪಕ್ಕೆ ಮಕ್ಕಳಿಗೆ ಶಿಕ್ಷೆ ಆಗದಿರಲಿ: ಸಿದ್ದರಾಮಯ್ಯ ಟ್ವೀಟ್

ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದ್ದ ಎಂಪವರ್ ಮೆಂಟ್ ಮಹಿಳಾ ಪರ್ಟಿ ಸಂಸ್ಥಾಪಕಿಯಾಗಿರುವ ನೌಹೀರಾ ವಿರುದ್ಧ 2018 ಮೇ ತಿಂಗಳ ಬಳಿಕ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ವಂಚನೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಆಗಸ್ಟ್ 25ರಂದು ಹೈದರಾಬಾದ್‌ನಲ್ಲಿ ಬಂಧಿಸಲಾಗಿತ್ತು.

ಎಂಇಪಿ ಚುನಾವಣೆಯಲ್ಲಿ ಒಂದೂ ಸೀಟು ಗೆಲ್ಲದೆ ಸೋಲು ಅನುಭವಿಸಿತ್ತು

ಎಂಇಪಿ ಚುನಾವಣೆಯಲ್ಲಿ ಒಂದೂ ಸೀಟು ಗೆಲ್ಲದೆ ಸೋಲು ಅನುಭವಿಸಿತ್ತು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಗಳನ್ನು ನಿಲ್ಲಿಸಿದ್ದ ಎಂಇಪಿ ಮುಖ್ಯಸ್ಥೆ ನೌಹೀರಾ ಶೇಖ್ ಹರಸಾಹಸ ಪಟ್ಟರೂ ಒಂದೂ ಸೀಟನ್ನು ಗಳಿಸಲು ಸಾಧ್ಯವಾಗಿರಲಿಲ್ಲ.

ಹಲವು ಕಡೆ ವಂಚನೆ ಆರೋಪ ಎದುರಿಸುತ್ತಿರವ ನೌಹೀರಾ

ಹಲವು ಕಡೆ ವಂಚನೆ ಆರೋಪ ಎದುರಿಸುತ್ತಿರವ ನೌಹೀರಾ

ನೌಹಿರಾ ಶೇಖ್ ಬೆಂಗಳೂರು, ಹೈದ್ರಾಬಾದ್, ಮುಂಬೈ, ಪುಣೆ, ದೆಹಲಿಯಲ್ಲಿ ಬಂಡವಾಳ ಹೂಡಿಕೆ ಮಾಡುವ ಹೆಸರಿನಲ್ಲಿ ಹಲವರಿಂದ ಹಣ ಪಡೆದು ಸಾವಿರ ಕೋಟಿಗೂ ಹೆಚ್ಚು ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಪಕ್ಷದ ಅಭ್ಯರ್ಥಿಗಳಿಂದ ಹಣ ಪಡೆದಿದ್ದರು

ಪಕ್ಷದ ಅಭ್ಯರ್ಥಿಗಳಿಂದ ಹಣ ಪಡೆದಿದ್ದರು

ಮಹಿಳಾ ಎಂಪವರ್‌ಮೆಂಟ್‌ ಪಕ್ಷದ ಅಧ್ಯಕ್ಷೆ ನೌಹೀರಾ ಶೇಖ್‌ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಪಕ್ಷದ ಅಭ್ಯರ್ಥಿಗಳಿಂದಲೇ ಹಣ ಪಡೆದಿದ್ದಲ್ಲದೆ, ಪಾರ್ಟಿ ಫಂಡ್ ನೆಪದಲ್ಲಿ ಅಭ್ಯರ್ಥಿಗಳಿಂದ ಖಾಲಿ ಚೆಕ್ ಪಡೆದು ವಂಚಿಸಿರುವ ಆರೋಪದ ಮೇಲೆ ಜೀವನ್‌ಭೀಮಾ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು.ಸಾಗರ ಕ್ಷೇತ್ರದ ಅಭ್ಯರ್ಥಿ ಕಲಾವತಿ ಅವರು ನೌಹೀರಾ ಶೇಖ್‌ ಅವರು ಚುನಾವಣಾ ಖರ್ಚನ್ನು ಪಕ್ಷದಿಂದಲೇ ನಿರ್ವಹಿಸುವುದಾಗಿ ನನ್ನಿಂದ 5 ಲಕ್ಷ ಪಡೆದಿದ್ದರು. ಚುನಾವಣೆಯಲ್ಲಿ ನಾನು 23 ಲಕ್ಷ ಸಾಲ ಮಾಡಿಕೊಂಡು ಪ್ರಚಾರ ನಡೆಸಿದ್ದೇನೆ ಎಂದು ದೂರಿದ್ದರು.

ನೌಹೀರಾ ಶೇಖ್ ಬಂಧನ

ನೌಹೀರಾ ಶೇಖ್ ಬಂಧನ

ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಎಂಇಪಿ ಪಕ್ಷದ ನೌಹೀರಾ ಶೇಖರ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.ಹೂಡಿಕೆದಾರರಿಗೆ 300 ಕೋಟಿ ರೂ ವಂಚನೆ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ, ಹೀರಾ ಗ್ರೂಪ್ ನ ಕಂಪನಿಗಳು ನಾನಾ ಹೂಡಿಕೆ ಯೋಜನೆಗಳನ್ನು ಹೊಂದಿದ್ವು. ಹಣಕಾಸು ವ್ಯವಹಾರದಲ್ಲಿ ಇಸ್ಲಾಮಿಕ್ ತತ್ವಗಳನ್ನು ಅನುಸರಿಸುವುದಾಗಿ ಕಂಪನಿ ಹೇಳಿಕೊಂಡಿತ್ತು. ಅನೇಕ ಹೂಡಿಕೆದಾರರು ದೂರುಗಳನ್ನು ನೀಡಿದ ಬಳಿಕ ಮೊದಲ ಸಲ ಶೇಖ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದರು.

English summary
Former minster Janardhana Reddy allegedly had received crores of money from MEP chief Dr.Nowhera Shaik biw who is in Mumbai police custody in cheating case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X