ಅಂತೂ ಆರ್ ಪಿಸಿ ಲೇಔಟ್ ರೈಲ್ವೆ ನಿಲ್ದಾಣ ಉದ್ಘಾಟನೆ
ಬೆಂಗಳೂರು, ಏ. 28 : ಆರ್ ಪಿಸಿ ಲೇಔಟ್ ನಿವಾಸಿಗಳ ಬಹುದಿನಗಳ ಬೇಡಿಕೆ ಇಂದು ಈಡೇರಿದೆ. ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲು ಒಂದು ನಿಮಿಷ ಕೃಷ್ಣದೇವರಾಯ ಹಾಲ್ಟ್ ಸ್ಟೇಷನ್ ನಲ್ಲಿ ಸೋಮವಾರದಿಂದ ನಿಲುಗಡೆಗೊಳ್ಳಲಿದೆ. ಆರು ತಿಂಗಳ ಮಟ್ಟಿಗೆ ಇಲ್ಲಿ ಪ್ರಾಯೋಗಿಕವಾಗಿ ರೈಲು ನಿಲುಗಡೆ ಮಾಡಲಾಗುತ್ತದೆ.
ನಗರ ರೈಲು ನಿಲ್ದಾಣ ಮತ್ತು ನಾಯಂಡಹಳ್ಳಿ ಮಧ್ಯೆ ಆರ್ ಪಿಸಿ ಲೇಔಟ್ನಲ್ಲಿಯೂ ನಿಲ್ದಾಣವೊಂದನ್ನು ಅಭಿವೃದ್ಧಿಪಡಿಸಿ ಪ್ಯಾಸೆಂಜರ್ ರೈಲುಗಳ ನಿಲುಗಡೆ ಅವಕಾಶ ಕಲ್ಪಿಸಬೇಕೆಂದು ವಿಜಯನಗರ, ಹಂಪಿನಗರ, ಗಿರಿನಗರ, ಬಾಪೂಜಿನಗರ, ಬ್ಯಾಟರಾಯನಪುರ, ಸುಬ್ಬಣ್ಣ ಲೇಔಟ್ ಮುಂತಾದ ಬಡಾವಣೆಗಳ ಜನರು ಒತ್ತಾಯಿಸುತ್ತಿದ್ದರು. ವಿಜಯನಗರ ತೆರಿಗೆ ಪಾವತಿದಾರರ ಸಂಘ ಈ ಕುರಿತು ಹೋರಾಟವನ್ನು ನಡೆಸುತ್ತಿತ್ತು.

ಸೋಮವಾರ ಈ ಬೇಡಿಕೆ ಈಡೇರಿದ್ದು, ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲನ್ನು ಕೃಷ್ಣದೇವರಾಯ ಹಾಲ್ಟ್ ಸ್ಟೇಷನ್ ನಲ್ಲಿ ಒಪ್ಪಿಗೆ ದೊರೆತಿದೆ. ಇಂದಿನಿಂದ ಪ್ರತಿದಿನ 2 ರೈಲುಗಳು ಒಂದು ನಿಮಿಷಗಳ ಕಾಲ ಕೃಷ್ಣದೇವರಾಯ ಹಾಲ್ಟ್ ಸ್ಟೇಷನ್ ನಲ್ಲಿ ನಿಲ್ಲಲಿವೆ. ಆರು ತಿಂಗಳ ಮಟ್ಟಿಗೆ ಪ್ರಾಯೋಗಿಕವಾಗಿ ರೈಲನ್ನು ನಿಲ್ಲಿಸಲಾಗುತ್ತಿದ್ದು, ನಂತರ ಜನರ ಪ್ರತಿಕ್ರಿಯೆ ನೋಡಿಕೊಂಡು ಅದನ್ನು ಮುಂದುವರೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. [ರೈಲ್ವೆ ಪ್ರಯಾಣ ರದ್ದಾದರೆ ರೀಫಂಡ್ ಮಾಡೋಲ್ಲ]
ಎಷ್ಟು ಹೊತ್ತಿಗೆ ಬರುತ್ತೆ ರೈಲು : ಬೆಳಗ್ಗೆ 5 ಗಂಟೆಗೆ ಹೊರಡುವ ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲು (56223) ಬೆಳಗ್ಗೆ 5.4ರಿಂದ 5.5ರ ವರೆಗೆ ನಿಲ್ದಾಣದಲ್ಲಿ ನಿಲ್ಲಲಿದೆ. ಸಂಜೆ ರಾತ್ರಿ ರೈಲು ನಂಬರ್ 56231 8.34 ರಿಂದ 8.35ರವರೆಗೆ ಕೃಷ್ಣದೇವರಾಯ ಹಾಲ್ಟ್ ಸ್ಟೇಷನ್ ನಲ್ಲಿ ನಿಲುಗಡೆಗೊಳ್ಳಲಿದೆ.
ನೀತಿ ಸಂಹಿತೆ ಬಿಸಿ : ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಉದ್ಘಾಟನಾ ಸಮಾರಂಭಗಳಿಲ್ಲದೆ ರೈಲು ನಿಲುಗಡೆಯನ್ನು ಆರಂಭಿಸಲಾಗಿದೆ. ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಗೊಳಿಸಿದೆ. ಆದರೆ, ಅದು ಅಧಿಕಾರಿಗಳ ಸಭೆಗಳಿಗೆ ಮಾತ್ರ ಅನ್ವಯವಾಗುವುದರಿಂದ ಯಾವುದೇ ಸಮಾರಂಭ ಮಾಡುತ್ತಿಲ್ಲ ಎಂದು ನೈರುತ್ಯ ರೈಲ್ವೆ ಸ್ಪಷ್ಪಪಡಿಸಿದೆ.
ಸೋಮವಾರದಿಂದ ರೈಲು ಕೃಷ್ಣದೇವರಾಯ ಹಾಲ್ಟ್ ಸ್ಟೇಷನ್ ನಲ್ಲಿ ನಿಲುಗಡೆಗೊಳ್ಳುವುದರಿಂದ ವಿಜಯನಗರ, ಹಂಪಿನಗರ, ಗಿರಿನಗರ, ಬಾಪೂಜಿನಗರ, ಬ್ಯಾಟರಾಯನಪುರ, ಸುಬ್ಬಣ್ಣ ಲೇಔಟ್ ಮುಂತಾದ ಬಡಾವಣೆಗಳ ಜನರಿಗೆ ಅನುಕೂಲವಾಗಲಿದೆ. ನಗರ ರೈಲು ನಿಲ್ದಾಣಕ್ಕೆ ತೆರಳುವ ಜನರು ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸುವ ಬದಲು ರೈಲಿನಲ್ಲಿಯೇ ಪ್ರಯಾಣಿಸಬಹುದಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications