ಬೆಂಗಳೂರು : 1.28 ಕೋಟಿ ಮೌಲ್ಯದ ಹಳೆ ನೋಟುಗಳು ವಶ
ನಿಷೇಧಿತ 500 ಹಾಗೂ 1000 ಹಳೆ ನೋಟುಗಳನ್ನು ಹೊಂದಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಗುರುವಾರದಂದು ಬಂಧಿಸಿದ್ದಾರೆ. ಅರೋಪಿಗಳ ಬಳಿ ಇದ್ದ ಹಳೆ ನೋಟುಗಳ ಲೆಕ್ಕ ಹಾಕಿದಾಗ 1.28 ಕೋಟಿ ರುಗೂ ಅಧಿಕ ಮೊತ್ತ ಸಿಕ್ಕಿದೆ.
ಬೆಂಗಳೂರು, ಮಾರ್ಚ್ 23: ನಿಷೇಧಿತ 500 ಹಾಗೂ 1000 ಹಳೆ ನೋಟುಗಳನ್ನು ಹೊಂದಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಗುರುವಾರದಂದು ಬಂಧಿಸಿದ್ದಾರೆ. ಅರೋಪಿಗಳ ಬಳಿ ಇದ್ದ ಹಳೆ ನೋಟುಗಳ ಲೆಕ್ಕ ಹಾಕಿದಾಗ 1.28 ಕೋಟಿ ರುಗೂ ಅಧಿಕ ಮೊತ್ತ ಸಿಕ್ಕಿದೆ.
ಬಂಧಿತರನ್ನು ಅಜಯ್ ಹಾಗೂ ರಾಹುಲ್ ಎಂದು ಗುರುತಿಸಲಾಗಿದ್ದು, ಇಬ್ಬರು ಕೂಡಾ ಕಮಿಷನ್ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ.

ಇಬ್ಬರು ಶೇಷಾದ್ರಿಪುರದಲ್ಲಿ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದಾರೆ. ಹಳೆ ನೋಟು ವಿನಿಮಯ ದಂಧೆ, ಫೇಕ್ ಕರೆನ್ಸಿ ಚಾಲನೆ, ಬಡ್ಡಿ ವ್ಯವಹಾರ ನಡೆಸುತ್ತಿದ್ದರು. ಅನೇಕ ಮಂದಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ.
ಈ ಜಾಲದಲ್ಲಿ ಇನ್ನೂ ಅನೇಕ ಮಂದಿ ಆರೋಪಿಗಳ ಬಂಧನ ನಿರೀಕ್ಷಿಸಬಹುದು ಎಂದು ಕ್ರೈಂ ವಿಭಾಗದ ಎಸಿಪಿ ಎಸ್ ರವಿ ಅವರು ಹೇಳಿದರು.

ಬೆಂಗಳೂರು ಸಿಟಿ ಕ್ರೈಂ ಬ್ರಾಂಚ್ ವಿಭಾಗದ ಪೊಲೀಸರು, ಗುರುವಾರ ಬೆಳಗ್ಗೆ ಶೇಷಾದ್ರಿಪುರದಲ್ಲಿರುವ ಅಪಾರ್ಟ್ಮೆಂಟ್ ಮೇಲೆ ಏಕಾಏಕಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದರು. ಮನೆಯಲ್ಲಿದ್ದ ನಗದು ಹಣ, ಚೆಕ್, ಒಂದಷ್ಟು ಕಡತಗಳನ್ನು ಜಪ್ತಿ ಮಾಡಲಾಯಿತು.
ಅಕ್ರಮವಾಗಿ ಅಪಾರ ಪ್ರಮಾಣದ ನಿಷೇಧಿತ ಹಣವನ್ನು ವಿನಿಮಯ ಮಾಡಿಕೊಳ್ಳುವವರಿಗೆ ಇವರಿಬ್ಬರು ನೆರವಾಗುತ್ತಿದ್ದರು. ಹೀಗೆ ಪಡೆದ ಹಳೆ ನೋಟುಗಳಿಗೆ ಬದಲಿಗೆ ನಕಲಿ ನೋಟುಗಳನ್ನು ವಿತರಿಸುತ್ತಿದ್ದರು.

ಹಣ ವಿನಿಮಯಕ್ಕಾಗಿ ಕಮಿಷನ್ ಪಡೆದುಕೊಳ್ಳುತ್ತಿದ್ದರು. ಈ ಜಾಲದಲ್ಲಿ ಇನ್ನೂ ಅನೇಕ ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ. (ಒನ್ಇಂಡಿಯಾ ಸುದ್ದಿ)
More From
-
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications