ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಾಯುಕ್ತರ ನೇಮಕಕ್ಕೆ ಮತ್ತೆ ಶುರುವಾಯ್ತು ಪ್ರತಿಭಟನೆ

ದೇಶದಲ್ಲೇ ಪ್ರಬಲ ಲೋಕಾಯುಕ್ತ ಸಂಸ್ಥೆಯಾಗಿದ್ದ ಕರ್ನಾಟಕ ಲೋಕಾಯುಕ ಸಂಸ್ಥೆಗೆ ಮುಖ್ಯಸ್ಥರನ್ನು ನೇಮಕ ಮಾಡಿ ಬರೊಬ್ಬರಿ 11 ತಿಂಗಳು ಕಳೆದರೂ ಇದುವರೆಗೂ ರಾಜ್ಯ ಸರ್ಕಾರ ಲೋಕಾಯುಕ್ತರನ್ನು ನೇಮಕ ಮಾಡಿಲ್ಲ

|
Google Oneindia Kannada News

ಬೆಂಗಳೂರು, ಅಕ್ಟೋಬರ್, 25: ಲೋಕಾಯುಕ್ತರನ್ನೂ ಶೀಘ್ರ ನೇಮಕ ಮಾಡುವಂತೆ ಒತ್ತಾಯಿಸಿ ಆರ್ ಟಿ ಐ ಕಾರ್ಯಕರ್ತರು ಮಂಗಳವಾರ (ಅ.25) ಲೋಕಾಯುಕ್ತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಕಪ್ಪುಪಟ್ಟಿ ಧರಿಸಿ ಭಿತ್ತಿ ಪತ್ರಗಳೊಂದಿಗೆ ಕಚೇರಿ ಮೆಟ್ಟಿಲುಗಳ ಮೇಲೆ ಆರ್ ಟಿ ಐ ಕಾರ್ಯಕರ್ತರು ಧರಣಿ ಆರಂಭಿಸಿದರು. ಪ್ರತಿಭಟನಕಾರರನ್ನು ಪೊಲೀಸ್ ಸಿಬ್ಬಂದಿ ಬಂಧಿಸಿ ಕರೆದೊಯ್ದರು.

ಲೋಕಾಯುಕ್ತರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ: ಕಾರ್ಯಕರ್ತರ ಬಂಧನ

ಲೋಕಾಯುಕ್ತ ಸಂಸ್ಥೆಗೆ ಹನ್ನೊಂದು ತಿಂಗಳಿನಿಂದ ನೇಮಕ ಮಾಡದೆ ಇರುವುದರಿಂದ ಸಂಸ್ಥೆ ಮುಚ್ಚುವ ಸ್ಥಿತಿಗೆ ಬಂದಿದೆ. ಸಂಸ್ಥೆಗೆ ಸಲ್ಲಿಕೆಯಾಗುತ್ತಿರುವ ದೂರುಗಳು ಧೂಳು ಹಿಡಿಯುತ್ತಿವೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇಬ್ಬರೂ ಉಪಲೋಕಾಯುಕ್ತರನ್ನು ನೇಮಕ ಮಾಡಲಾಗಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ದೂರುಗಳು ವಿಲೇವಾರಿ ಆಗದೆ ಹಾಗೆಯೇ ಉಳಿದಿವೆ ಎಂದು ಕಾರ್ಯಕರ್ತರು ತಿಳಿಸಿದರು.

ಆರ್ ಟಿ ಐನಲ್ಲಿ ಸಲ್ಲಿಸುವ ಅರ್ಜಿಗೂ ಮಾಹಿತಿ ನೀಡುತ್ತಿಲ್ಲ. ಸರ್ಕಾರ ಕೂಡಲೇ ಲೋಕಾಯುಕ್ತರನ್ನು ನೇಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

English summary
RTI activist protest to appoint Lokayukta in Bengaluru on Monday,(Oct. 25). The Police were arrested protesters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X