ಸಾರಕ್ಕಿ ಕೆರೆ ತೆರವು: ದಿಢೀರ್ ಕುಸಿದು ಬಿದ್ದ ಕಟ್ಟಡ
ಬೆಂಗಳೂರು, ಏ. 17: ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದಿದೆ. ಡಿಸಿ ಶಂಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು 800 ಸಿಬ್ಬಂದಿ ಭಾಗಿಯಾಗಿದ್ದಾರೆ. ಮೂರು ತಂಡಗಳಾಗಿ ಕೆಲಸ ನಡೆಯುತ್ತಿದೆ.
ಶುಕ್ರವಾರ ಬೆಳಗ್ಗೆ 7.30 ಕ್ಕೆ ತರವು ಕೆಲಸ ಆರಂಭ ಮಾಡಲಾಗಿದ್ದು ಸಂಜೆಯವರೆಗೂ ನಡೆಯಲಿದೆ. ಶುಕ್ರವಾರ ಬೆಳಗ್ಗೆ 7 ಅಡಿ ಕಟ್ಟಡವೊಂದನ್ನು ಕೆಡವುತ್ತಿದ್ದಾಗ ಸಂಭವಿಸಬಹುದಾಗಿದ್ದ ಅಪಘಾತ ಕೊಂಚದರಲ್ಲಿ ತಪ್ಪಿದೆ. ಹಿಟಾಚಿ ಮೂಲಕ ಕಾರ್ಯಾಚರಣೆ ಮಾಡುತ್ತಿದ್ದಾಗ ಏಳು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿಮ ಯಾರಿಗೂ ಅಪಾಯವಾಗಿಲ್ಲ.[ಡಿಸಿ ಶಂಕರ್ ದಿಟ್ಟ ನಡೆ: ಸಾರಕ್ಕಿ ಕೆರೆ ತೆರವು ಸರ್ಕಾರಕ್ಕೆಷ್ಟು ಲಾಭ?]

ಕಟ್ಟಡ ಕುಸಿದು ಬಿದ್ದ ಪರಿಣಾಮ ಹಿಟಾಚಿ ಯಂತ್ರದ ಮೇಲೆ ಅವಶೇಷಗಳು ಬಿದ್ದವು. ಚಾಲಕ ಕೊಂಚದರಲ್ಲಿ ಪಾರಾಗಿದ್ದು ಯಂತ್ರವನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ.
ಈ ರೀತಿಯ ಮೂರ್ನಾಲ್ಕು ಅಪಾರ್ಟ್ ಮೆಂಟ್ ಗಳನ್ನು ತೆರವು ಮಾಡಬೇಕಿದೆ. 8 ಜೆಸಿಬಿಗಳು ಕೆಲಸದಲ್ಲಿ ತೊಡಗಿಕೊಂಡಿದ್ದು ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗದೆ. ಪೂರ್ವಾಂಕರ ಅಪಾರ್ಟ್ ಮೆಂಟ್ ನಿಂದಲೂ ಜಾಗ ಒತ್ತುವರಿಯಾಗಿದೆ ಎಂದು ಹೇಳಲಾಗಿದೆ.[ಸಾರಕ್ಕಿ ಕೆರೆ ತೆರವು: 2 ಸಾವಿರ ಕೋಟಿ ಮೌಲ್ಯದ ಜಾಗ ವಶ]
ಕಟ್ಟಡ ದೀಢಿರ್ ಎಂದು ಕುಸಿದುಬಿದ್ದ ಪರಿಣಾಮ ಕಾರ್ಯಾಚರಣೆಗೆ ಅರ್ಧ ಗಂಟೆ ಅಡ್ಡಿ ಉಂಟಾಗಿತ್ತು. 82 ಎಕರೆ ವಿಸ್ತಾರದ ಸಾರಕ್ಕಿ ಕೆರೆಯಲ್ಲಿ ಸುಮಾರು 32 ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿತ್ತು. ಹೈ ಕೋರ್ಟ್ ಆದೇಶದಂತೆ ಜಿಲ್ಲಾರಧಿಕಾರಿ ಶಂಕರ್ ತೆರವು ಕಾರ್ಯಾಚರಣೆಯನ್ನು ಗುರುವಾರ ಆರಂಭಿಸಿದ್ದರು. ನಾಳೆ ಬಂದ್ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತ ಮಾಡುವ ಸಂಭವವಿದ್ದು ಮತ್ತೆ ಭಾನುವಾರ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications