ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಬಗ್ಗೆ ದಿನೇಶ್ ಗುಂಡೂರಾವ್‌ಗೆ ವರದಿ ನೀಡಿದ ಸತೀಶ್ ಜಾರಕಿಹೊಳಿ

|
Google Oneindia Kannada News

ಬೆಂಗಳೂರು, ಜನವರಿ 03: ಕಾಂಗ್ರೆಸ್‌ಗೆ ಬಿಸಿತುಪ್ಪವಾಗಿರುವ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಲು ಇಂದು ಸಹೋದರ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಆಗಿದ್ದರು.

ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ

ಡಾಲರ್ಸ್‌ ಕಾಲೊನಿಯಲ್ಲಿಯ ದಿನೇಶ್ ಗುಂಡೂರಾವ್ ಅವರ ಮನೆಗೆ ಇಂದು ಭೇಟಿ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಬಹು ಸಮಯ ಮಾತುಕತೆ ನಡೆಸಿದರು.

ಕಾಂಗ್ರೆಸ್‌ಗೆ ರಾಜೀನಾಮೆ ನೀಡದಂತೆ ರಮೇಶ್‌ ಬಳಿ ಮಾತನಾಡ್ತೀನಿ: ಸತೀಶ್‌ಕಾಂಗ್ರೆಸ್‌ಗೆ ರಾಜೀನಾಮೆ ನೀಡದಂತೆ ರಮೇಶ್‌ ಬಳಿ ಮಾತನಾಡ್ತೀನಿ: ಸತೀಶ್‌

ಸಂಪುಟ ವಿಸ್ತರಣೆ ವೇಳೆ ರಮೇಶ್‌ ಜಾರಕಿಹೊಳಿ ಅವರ ಸಚಿವ ಸ್ಥಾನವನ್ನು ಕಿತ್ತುಕೊಂಡು, ಸಹೋದರ ಸತೀಶ್‌ ಜಾರಕಿಹೊಳಿ ಅವರಿಗೆ ಕೊಡಲಾಗಿದೆ. ಇದು ರಮೇಶ್ ಅವರಿಗೆ ಅಸಮಾಧಾನ ತರಿಸಿದೆ. ರಮೇಶ್ ಜಾರಕಿಹೊಳಿ ಅವರನ್ನು ಸಮಾಧಾನಪಡಿಸುವ ಜವಾಬ್ದಾರಿಯನ್ನು ಸತೀಶ್‌ ಜಾರಕಿಹೊಳಿ ಅವರಿಗೆ ವಹಿಲಾಗಿತ್ತು.

Satish Jarkiholi met KPCC president Dinesh Gundurao today

ಅದರಂತೆ ನಿನ್ನೆ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾತನಾಡಿರುವ ಸತೀಶ್ ಜಾರಕಿಹೊಳಿ ಮಾತುಕತೆಯ ವರದಿ ಒಪ್ಪಿಸಲು ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಆಗಿದ್ದಾರೆ.

ರಮೇಶ್‌ ಒಬ್ಬ ಹಠವಾದಿ: ಸತೀಶ್ ಜಾರಕಿಹೊಳಿ ಹೇಳಿಕೆರಮೇಶ್‌ ಒಬ್ಬ ಹಠವಾದಿ: ಸತೀಶ್ ಜಾರಕಿಹೊಳಿ ಹೇಳಿಕೆ

ನಿನ್ನೆ ರಮೇಶ್ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯ ಭೇಟಿ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಭೇಟಿ ಸಾಧ್ಯವಾಗಿಲ್ಲ. ಹಾಗಾಗಿ ಇಂದು ದಿನೇಶ್ ಗುಂಡೂರಾವ್ ಸೇರಿ ಕಾಂಗ್ರೆಸ್ ಮುಖಂಡರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಆಗುವ ಸಾಧ್ಯತೆ ಇದೆ.

English summary
Minster Satish Jarkiholi met KPCC president Dinesh Gundurao today in his residence. Satish Jarkiholi gave report about Ramesh Jarkiholi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X