ಸುಪ್ರೀಂ ಆದೇಶದಿಂದ ಆಘಾತ, ಮಹತ್ವದ ಸರ್ವಪಕ್ಷಗಳ ಸಭೆ
ಬೆಂಗಳೂರು, ಅಕ್ಟೋಬರ್ 01: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ನೀಡಿದ ಆದೇಶವನ್ನು ಪಾಲಿಸುವುದರ ಬಗ್ಗೆ ಚರ್ಚಿಸಲು ಶನಿವಾರದಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಕಾವೇರಿ ಜಲವಿವಾದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ(ಅ.1) ಸರ್ವಪಕ್ಷ ಸಭೆ ಕರೆದಿದ್ದಾರೆ.
ವಿಪಕ್ಷ ಮುಖಂಡರು, ರಾಜ್ಯ ಸಚಿವರು, ಶಾಸಕರು, ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಉಭಯ ಸದನಗಳ ಸದಸ್ಯರು, ಕೇಂದ್ರ ಸಚಿವರು, ಕಾವೇರಿ ಕೊಳ್ಳದ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿಧಾನಸೌಧದದಲ್ಲಿ ಶನಿವಾರ ಸಂಜೆ 2ಗಂಟೆಗೆ ಸಭೆ ನಡೆಯಲಿದೆ. [ನೀರು ಬಿಡಿ, ಇಲ್ಲ ಪರಿಣಾಮ ಎದುರಿಸಿ : ಸುಪ್ರೀಂ]

ನಾಲ್ಕು ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿ ಎಂದಿದ್ದ ಸುಪ್ರೀಂಕೋರ್ಟ್ ತನ್ನ ಆದೇಶ ಬದಲಿಸಿ ತ್ವರಿತವಾಗಿ ಮಂಡಳಿ ರಚನೆಗೆ ಆದೇಶಿಸಿದೆ. ಸುಪ್ರೀಂ ಆದೇಶಕ್ಕೆ ಕೇಂದ್ರ ಸರ್ಕಾರ ಕೂಡಾ ತಲೆ ಬಾಗಿದೆ. [ಆದೇಶ ವಿರುದ್ಧ ನಿಂತರೆ, ಕರ್ನಾಟಕದ ಗತಿ ಏನು?]
ಚರ್ಚೆ 1: ಕಾವೇರಿ ನಿರ್ವಹಣಾ ಮಂಡಳಿ(ಸಿಎಂಬಿ) ರಚನೆ: ಈ ಮಂಡಳಿಯಲ್ಲಿ ನಾಲ್ಕು ರಾಜ್ಯಗಳ ಸದಸ್ಯರು, ಕೃಷಿ ಮತ್ತು ನೀರಾವರಿ ತಜ್ಞರು, ಜಲ ಆಯೋಗದ ಅಧಿಕಾರಿಗಳು ಇರಲಿದ್ದಾರೆ. ಎಲ್ಲರನ್ನು ಕೇಂದ್ರ ಸರ್ಕಾರ ನೇಮಿಸಲಿದೆ.[ಸುಪ್ರೀಂಕೋರ್ಟ್ ಆದೇಶಕ್ಕೆ ಕರ್ನಾಟಕ ಬಗ್ಗಲೇಬೇಕು ಏಕೆ?]
ಅಕ್ಟೋಬರ್ 4 ರೊಳಗೆ ಈ ಸಮಿತಿಯಲ್ಲಿರುವ ಸದಸ್ಯರ ಪಟ್ಟಿಯನ್ನು ಸುಪ್ರೀಂಕೋರ್ಟಿಗೆ ಕೇಂದ್ರ ಸರ್ಕಾರ ಸಲ್ಲಿಸಬೇಕಿದೆ. ಇದಕ್ಕಾಗಿ ರಾಜ್ಯದ ಪ್ರತಿನಿಧಿಗಳ ಹೆಸರುಗಳನ್ನು ಸಿದ್ದರಾಮಯ್ಯ ಅವರು ಸೂಚಿಸಬೇಕಿದೆ.[ನಿರ್ವಹಣಾ ಮಂಡಳೀ ರಚನೆ, ಕರ್ನಾಟಕಕ್ಕೆ ಮಾರಕ]
ಸಾಧ್ಯತೆ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ. ಈ ಬಗ್ಗೆ ಮುಂದಿನ ವಿಚಾರಣೆಗೂ ಮುನ್ನ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ. ಜೆಡಿಎಸ್ ಈಗಾಗಲೇ ಸೂಚನೆ ನೀಡಿದೆ.
ಚರ್ಚೆ 2: ಸುಪ್ರೀಂ ಆದೇಶ : ಅಕ್ಟೋಬರ್ 01ರಿಂದ ಅಕ್ಟೋಬರ್ 06ರ ತನಕ ಪ್ರತಿ ದಿನ 6,000 ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕಕ್ಕೆಸೂಚಿಸಿದೆ. ಅಂದರೆ ಸುಮಾರು 3.13 ಟಿಎಂಸಿ ನೀರು ಬಿಡಬೇಕಾಗುತ್ತದೆ.
ನಿರ್ಣಯ ಸಾಧ್ಯತೆ: ಕುಡಿಯುವುದಕ್ಕೂ ನೀರು ಇಲ್ಲದಿರುವುದರಿಂದ ಆದೇಶ ವಿಳಂಬ ಮಾಡಿ, ಅಕ್ಟೋಬರ್ 06ರಂದು ವಿಚಾರಣೆ ಎದುರಿಸಿ ಮನವಿ ಮಾಡುವುದು. ಸುಪ್ರೀಂಗೆ ಮನವರಿಕೆ ಸಾಧ್ಯವಾಗದಿದ್ದರೆ, ಮತ್ತೊಂದು ನ್ಯಾಯಪೀಠಕ್ಕೆ ಅರ್ಜಿ ವರ್ಗಾವಣೆಗೆ ಕೋರುವುದು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications