ನಿರ್ಮಲಾ ಸೀತಾರಾಮನ್ ವರ್ತನೆಗೆ ಸಿದ್ದರಾಮಯ್ಯ ಕೆಂಗಣ್ಣು
ಬೆಂಗಳೂರು, ಆಗಸ್ಟ್ 25: ಅಧ್ಯಯನಕ್ಕೆ ಬಂದ ಕೇಂದ್ರ ಸಚಿವರು ರಾಜ್ಯ ಸಚಿವರನ್ನು ಹಿಂದಿಕ್ಕುವುದರಲ್ಲೇ ಮಗ್ನರಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಗರಂ ಆಗಿರುವ ಸಿದ್ದರಾಮಯ್ಯ ಪ್ರಧಾನಿ ಮೋದಿಯ ಮಲತಾಯಿ ಧೋರಣೆಯನ್ನು ಖಂಡಿಸುತ್ತೇನೆ, ಕೊಡಗಿಗೆ ಪರಿಹಾರ ಹಣ ಬಿಡುಗಡೆ ಮಾಡುವಲ್ಲಿ ಕೇಂದ್ರ ತಾರತಮ್ಯ ತೋರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
I condemn the stepmotherly treatment by @PMOIndia in releasing relief funds. We expected PM @narendramodi to assess the loss instead it was delegated to @DefenceMinIndia, who was more interested in dominating our state minister. This reflects @BJP4India 's apathy towards Ktaka.
— Siddaramaiah (@siddaramaiah) August 25, 2018
ನಿರ್ಮಲಾ ಸೀತಾರಾಮನ್ ವಿರುದ್ಧ ಪರಮೇಶ್ವರ್ ಟ್ವೀಟ್ ಟೀಕೆ
ಸಚಿವೆ ನಿರ್ಮಲಾ ಸೀತಾರಾಮನ್ ಕೊಡಗಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೊಡಗು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರ ಮೇಲೆ ಹರಿಹಾಯ್ದಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರಾಗಿ ಮತ್ತೊಂದು ಸಚಿವರ ಮೇಲೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.
ಜತೆಗೆ ಕೇಂದ್ರ ಸರ್ಕಾರ ಕೇರಳಕ್ಕೆ ಅನುದಾನ ನೀಡಿದೆ, ಆದರೆ ಕೊಡಗಿಗೆ ಅನುದಾನ ನೀಡಲು ಹಿಂದೇಟು ಹಾಕುತ್ತಿದೆ. ಕೊಡಗಿನ ಪರಿಸ್ಥಿತಿಯನ್ನು ನೋಡಿದ ಮೇಲೆಯೂ ಅವರಿಗೆ ಕನಿಕರ ಬಂದಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.