ವಿಜಯ ಕುಮಾರ್ ನಿಧನಕ್ಕೆ ಸಿದ್ದರಾಮಯ್ಯ ತೀವ್ರ ಸಂತಾಪ
Recommended Video
ಬೆಂಗಳೂರು, ಮೇ 04: ಜಯನಗರ ಬಿಜೆಪಿ ಶಾಸಕ ಬಿ ಎನ್ ವಿಜಯಕುಮಾರ್(60) ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್(60) ವಿಧಿವಶ
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಜಯನಗರ ಶಾಸಕ ಬಿ ಎನ್ ವಿಜಯಕುಮಾರ್ ಹೃದಯಾಘಾತದಿಂದ ಮರಣಹೊಂದಿದ್ದಾರೆ ಎಂದು ತಿಳಿದು ತೀವ್ರ ಆಘಾತವಾಯಿತು. ಅವರ ಕುಟುಂಬಕ್ಕೆ ಮತ್ತು ಅವರ ಆಪ್ತರಿಗೆ ನನ್ನ ಸಂತಾಪಗಳು. ವಿಜಯ ಕುಮಾರ್ ಒಬ್ಬ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದಿದ್ದಾರೆ.
Jayanagara MLA Shri B N Vijaya Kumar has died suddenly apparently due to cardiac arrest.
— Siddaramaiah (@siddaramaiah) May 4, 2018
I express my condolences to his family & loved ones. Shri Vijaya Kumar was a sincere & hard working political leaders
May his soul rest in peace. pic.twitter.com/Q7D8lERleZ
ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜಯನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯ ಕುಮಾರ್, ಗುರುವಾರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಜಯದೇವ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.